ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬಾಂಬ್ ನಿಷ್ಕ್ರೀಯ ದಳದಿಂದ ತಪಾಸಣೆ

12:20 PM, Friday, August 12th, 2016
Share
1 Star2 Stars3 Stars4 Stars5 Stars
(No Ratings Yet)
Loading...

Bomb nishkriya dalaಬಂಟ್ವಾಳ: ಮಂಗಳೂರು ಪೋಲೀಸ್ ವರಿಷ್ಟಾಧಿಕಾರಿ ಭೂಷಣ್ ಜಿ.ಬೋರಾಸೆ ಅವರ ನೇತೃತ್ವದ ಪಶ್ಚಿಮವಲಯದ ಬಾಂಬ್ ನಿಷ್ಕ್ರೀಯ ದಳ ಇವರ ತಂಡದಿಂದ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲೇಯಾದ್ಯಂತ ಪ್ರಮುಖ ಸ್ಥಳಗಳಾದ ಬಸ್ ನಿಲ್ದಾಣ, ಕೋರ್ಟು, ರೈಲ್ವೆ ನಿಲ್ದಾಣ ಮತ್ತು ಪ್ರವಾಸಿ ತಾಣಗಳಲ್ಲಿ ವಿಶೇಷ ತಪಾಸಣೆ ನಡೆಸಿದರು.

ಬಂಟ್ವಾಳದಲ್ಲೂ ಖಾಸಗಿ ಬಸ್ ನಿಲ್ದಾಣ, ಕೋರ್ಟು ಮತ್ತು ರೈಲ್ವೆ ನಿಲ್ದಾಣಗಳಲ್ಲಿ ಸಂಚರಿಸಿ ತಪಾಸಣೆ ನಡೆಸಿದರು.

ಮೈಸೂರು ನಲ್ಲಿ ನಡೆದ ಘಟನೆಯ ಹಿನ್ನಲೆಯಲ್ಲಿ ಮುಂಜಾಗ್ರತೆಯ ಕ್ರಮವಾಗಿ ಇಲ್ಲೂ ತಪಾಸಣೆ ನಡೆಸಲಾಗುತ್ತಿದೆ ಎಂದು ಪೋಲೀಸ್ ವರಿಷ್ಟಾಧಿಕಾರಿ ಭೂಷಣ್ ಜಿ.ಬೋರಾಸೆ ಅವರು ತಿಳಿಸಿದ್ದಾರೆ.

Bomb nishkriya dala

Bomb-nishkriya-dala3

Bomb-nishkriya-dala4

Bomb-nishkriya-dala-5

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English