[1]ಬಂಟ್ವಾಳ: ಮಂಗಳೂರು ಪೋಲೀಸ್ ವರಿಷ್ಟಾಧಿಕಾರಿ ಭೂಷಣ್ ಜಿ.ಬೋರಾಸೆ ಅವರ ನೇತೃತ್ವದ ಪಶ್ಚಿಮವಲಯದ ಬಾಂಬ್ ನಿಷ್ಕ್ರೀಯ ದಳ ಇವರ ತಂಡದಿಂದ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲೇಯಾದ್ಯಂತ ಪ್ರಮುಖ ಸ್ಥಳಗಳಾದ ಬಸ್ ನಿಲ್ದಾಣ, ಕೋರ್ಟು, ರೈಲ್ವೆ ನಿಲ್ದಾಣ ಮತ್ತು ಪ್ರವಾಸಿ ತಾಣಗಳಲ್ಲಿ ವಿಶೇಷ ತಪಾಸಣೆ ನಡೆಸಿದರು.
ಬಂಟ್ವಾಳದಲ್ಲೂ ಖಾಸಗಿ ಬಸ್ ನಿಲ್ದಾಣ, ಕೋರ್ಟು ಮತ್ತು ರೈಲ್ವೆ ನಿಲ್ದಾಣಗಳಲ್ಲಿ ಸಂಚರಿಸಿ ತಪಾಸಣೆ ನಡೆಸಿದರು.
ಮೈಸೂರು ನಲ್ಲಿ ನಡೆದ ಘಟನೆಯ ಹಿನ್ನಲೆಯಲ್ಲಿ ಮುಂಜಾಗ್ರತೆಯ ಕ್ರಮವಾಗಿ ಇಲ್ಲೂ ತಪಾಸಣೆ ನಡೆಸಲಾಗುತ್ತಿದೆ ಎಂದು ಪೋಲೀಸ್ ವರಿಷ್ಟಾಧಿಕಾರಿ ಭೂಷಣ್ ಜಿ.ಬೋರಾಸೆ ಅವರು ತಿಳಿಸಿದ್ದಾರೆ.