ಮಂಗಳೂರು: ನಗರದ ಆಸ್ಪತ್ರೆಯಲ್ಲಿ ಮಹಿಳೆಯೊರ್ವರು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿಂದು ನಡೆದಿದೆ.
ಸುಶೀಲಾ (67) ಎಂಬ ಅಸ್ತಮಾ ರೋಗಿ ಆತ್ಮಹತ್ಯೆಗೆ ಶರಣಾಗಿರುವ ವೃದ್ಧೆ ಎಂದು ತಿಳಿದುಬಂದಿದೆ.
ಅಸ್ತಮಾ ಕಾಯಿಲೆಯಿಂದ ನರಳುತ್ತಿದ್ದ ಸುಶೀಲಾ ಅವರು ನಗರದ ಕೆ. ಎಸ್. ರಾವ್ ರಸ್ತೆಯಲ್ಲಿರುವ ಜಯಶ್ರೀ ಆಸ್ಪತ್ರೆಗೆ ಚಿಕಿತ್ಸೆಗಾಗಿ ನೆನ್ನೆ ದಾಖಲಾಗಿದ್ದರು. ರಾತ್ರಿ 11 ಗಂಟೆಯ ವೇಳೆಗೆ ಚಿಕಿತ್ಸೆಯನ್ನು ಪಡೆದಿದ್ದಾರೆ.
ಇಂದು ಬೆಳಗ್ಗೆ ನರ್ಸ್ಗಳು ಚಿಕಿತ್ಸೆ ನೀಡಲು ಬಂದಾಗ ಬಾಗಿಲು ತೆರೆದಿಲ್ಲ. ಹೀಗಾಗಿ ಅನುಮಾನಗೊಂಡು ಬಾಗಿಲು ಮುರಿದು ಒಳಹೋಗಿದ್ದಾರೆ. ಆಗ ಸುಶೀಲಾ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಈ ವೃದ್ಧೆ ಎಲ್ಲಿಯವರು, ಆತ್ಮಹತ್ಯೆಗೆ ಕಾರಣ ಏನು ಎನ್ನುವುದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಘಟನೆಯ ಕುರಿತು ಮಂಗಳೂರು ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Click this button or press Ctrl+G to toggle between Kannada and English