ಪುತ್ತೂರು: ಸ್ವಾತಂತ್ರ್ಯವನ್ನು ಏಕತೆ ಹಾಗೂ ಒಗ್ಗಟ್ಟಿನಿಂದ ಆಚರಿಸುತ್ತಿದ್ದೇವೆ. ವೈವಿಧ್ಯತೆಯಲ್ಲೂ ಸಮಬಾಳ್ವೆಯ ಜೀವನ ನಮ್ಮದಾಗಬೇಕು. ಸ್ವಾತಂತ್ರ್ಯದ ಮಹತ್ವವನ್ನು ಅರಿತುಕೊಂಡಾಗ ಸಮಬಾಳ್ವೆಯ ಜೀವನ ಸಾಧ್ಯ ಎಂದು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ರಾಮಚಂದ್ರ ಹೇಳಿದರು.
ತೆಂಕಿಲ ವಿವೇಕಾನಂದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲಾ ವತಿಯಿಂದ ದರ್ಬೆಯಲ್ಲಿ ‘ಯಾದ್ ಕರೋ ಕುರ್ಬಾನಿ’ ಕಾರ್ಯಕ್ರಮದಲ್ಲಿ ಫ್ರೀಡಂ ರನ್ಗೆ ಬಲೂನ್ ಹಾರಿಸುವ ಮೂಲಕ ಅವರು ಚಾಲನೆ ನೀಡಿದರು. ಬಳಿಕ ಬೊಳುವಾರುವರೆಗೆ ವಿದ್ಯಾರ್ಥಿಗಳಿಂದ ಫ್ರೀಡಂ ರನ್ ನಡೆಯಿತು.
ಕಾರ್ಯಕ್ರಮವನ್ನು ಮಾಜಿ ಶಾಸಕ ರಾಮ ಭಟ್ ಉದ್ಘಾಟಿಸಿದರು. ಹೆಚ್ಚುವರಿ ಪ್ರಧಾನ ಸಿವಿಲ್ ನ್ಯಾಯಾಧೀಶ ಬಸವರಾಜು, ವಕೀಲರ ಸಂಘದ ಅಧ್ಯಕ್ಷ ದುರ್ಗಾಪ್ರಸಾದ್ ರೈ, ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲ ಕೃಷ್ಣಮೂರ್ತಿ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯಶಿಕ್ಷಕ ಸತೀಶ್ ರೈ, ವಿವೇಕಾನಂದ ವಿದ್ಯಾವರ್ಧಕ ಸಂಘದ ಶಿವಪ್ರಸಾದ್ ಇ, ಶ್ರೀನಿವಾಸ್ ಮೊದಲಾದವರು ಉಪಸ್ಥಿತರಿದ್ದರು.
ವಿವೇಕಾನಂದ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿವೇಕಾನಂದ ಕಾಲೇಜಿನ ಎನ್ಸಿಸಿ ಕೆಡೆಟ್ಗಳು ಗೌರವ ರಕ್ಷೆ ನೀಡಿದರು.
Click this button or press Ctrl+G to toggle between Kannada and English