ಮುಖ್ಯಮಂತ್ರಿಯವರ ಮೇಲೆ ಪೂಜಾರಿ ಮಾಡಿರುವ ಟೀಕೆ ಸರಿಯಲ್ಲ : ಖಾದರ್‌

11:37 AM, Wednesday, August 17th, 2016
Share
1 Star2 Stars3 Stars4 Stars5 Stars
(No Ratings Yet)
Loading...

Khader Press ಮಂಗಳೂರು:  ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರು ಮಹಾದಾಯಿ ಪ್ರತಿಭಟನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತು ನೀಡಿರುವ ಹೇಳಿಕೆ ನನಗೆ ನೋವು ತಂದಿದೆ ಎಂದು ಸಚಿವ ಯು.ಟಿ. ಖಾದರ್‌ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರೈತರ ಶಾಪ ತಟ್ಟಲಿದೆ ಎಂಬ ಪೂಜಾರಿಯವರ ಹೇಳಿಕೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಜನಾರ್ದನ ಪೂಜಾರಿ ನನ್ನ ನಾಯಕರು. ನನ್ನ ರಾಜಕೀಯ ಭವಿಷ್ಯ ರೂಪಿಸಿದವರು. ಅವರ ಮೇಲೆ ಅಪಾರ ಗೌರವ ಇದೆ. ಆದರೆ ಮಹಾದಾಯಿ ವಿಚಾರದಲ್ಲಿ ಮುಖ್ಯಮಂತ್ರಿಯವರ ಮೇಲೆ ಅವರು ಮಾಡಿರುವ ಟೀಕೆ ಸರಿಯಲ್ಲ. ಗೃಹಸಚಿವ ಡಾ| ಜಿ. ಪರಮೇಶ್ವರ್‌ ಅವರು ಪೊಲೀಸರ ಕ್ರಮಕ್ಕೆ ರೈತರ ಕ್ಷಮೆ ಯಾಚಿಸಿದ್ದರು. ದೌರ್ಜನ್ಯ ನಡೆಸಿದ ಪೊಲೀಸ್‌ ಅಧಿಕಾರಿ ಹಾಗೂ ಸಿಬಂದಿಯನ್ನು ಅಮಾನತು ಮಾಡಲಾಗಿದೆ ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English