ಹೂವಿನ ವ್ಯಾಪಾರಿಯ ಮೃತದೇಹ ಬಾವಿಯಲ್ಲಿ ಪತ್ತೆ

12:32 PM, Thursday, August 18th, 2016
Share
1 Star2 Stars3 Stars4 Stars5 Stars
(No Ratings Yet)
Loading...

Jayaraj-Shettyಮಂಗಳೂರು: ನಗರದ ಹೂವಿನ ವ್ಯಾಪಾರಿ ಜಯರಾಜ್ ಶೆಟ್ಟಿ(42) ಎಂಬುವವರ ಮೃತದೇಹ ಅವರ ಮನೆಯ ಬಾವಿಯಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿರಬಹುದು ಶಂಕಿಸಲಾಗಿದೆ.

ನಗರದ ಪಚ್ಚನಾಡಿ ನಿವಾಸಿಯಾಗಿರುವ ಅವರು, ಮನೆಯಲ್ಲಿ ಹಣಕಾಸಿನ ಸಮಸ್ಯೆಯಿಂದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಮೃತರು ನಗರದ ರಥಬೀದಿಯಲ್ಲಿ ಸಂಭ್ರಮ ಹೆಸರಿನ ಹೂವಿನ ಅಂಗಡಿ ಹೊಂದಿದ್ದು, ಹೂವಿನ ಆಲಂಕಾರದ ಕೆಲಸ ನಿರ್ವಹಿಸುತ್ತಿದ್ದರು.

ಆ. 16ರ ಮಧ್ಯಾಹ್ನ ಮನೆಯಿಂದ ಹೊರ ಹೋದವರು ಕಾಣೆಯಾಗಿದ್ದರು. ಇಂದು ಅವರ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ. ಎರಡು ತಿಂಗಳ ಹಿಂದೆ ಪಚ್ಚನಾಡಿಯಲ್ಲಿ ಸ್ವಂತ ಮನೆ ನಿರ್ಮಿಸಿದ್ದರು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English