ಕದ್ರಿ ದೇವಸ್ಥಾನದ ಪ್ರಾಂಗಣದಲ್ಲಿ ಕಲ್ಕೂರ ಪ್ರತಿಷ್ಠಾನದ “ಶ್ರೀ ಕೃಷ್ಣ ವೇಷ ಸ್ಪರ್ಧೆ’

10:05 AM, Friday, August 26th, 2016
Share
1 Star2 Stars3 Stars4 Stars5 Stars
(No Ratings Yet)
Loading...

Shree-Krishnaಮಂಗಳೂರು : ಕಲ್ಕೂರ ಪ್ರತಿಷ್ಠಾನದ ವತಿಯಿಂದ ಆಯೋಜಿಸುತ್ತಿರುವ ರಾಷ್ಟ್ರ ಮಟ್ಟದ ಮಕ್ಕಳ ಉತ್ಸವ “ಶ್ರೀ ಕೃಷ್ಣ ವೇಷ ಸ್ಪರ್ಧೆ’ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಪ್ರಾಂಗಣದಲ್ಲಿ ಬುಧವಾರ ನಡೆಯಿತು. ಬೆಳಗ್ಗಿನಿಂದ ಸಂಜೆ ವರೆಗೆ ಒಟ್ಟು 8 ವೇದಿಕೆಗಳಲ್ಲಿ 27 ವಿಭಾಗಗಳ ಸ್ಪರ್ಧೆ ಜರಗಿದವು.

ರಾಷ್ಟ್ರ ಮಟ್ಟದ ಮಕ್ಕಳ ಉತ್ಸವವನ್ನು ಎ.ಜೆ. ಸಮೂಹ ಸಂಸ್ಥೆಯ ಅಧ್ಯಕ್ಷ ಎ.ಜೆ. ಶೆಟ್ಟಿ ಉದ್ಘಾಟಿಸಿ, ಶುಭ ಕೋರಿದರು. ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಧಿಸ್ಥಾನದ ವೇ| ಮೂ| ಲಕ್ಷ್ಮಿನಾರಾಯಣ ಆಸ್ರಣ್ಣ ಆಶೀರ್ವಚನ ನೀಡಿದರು.

ಕದ್ರಿ ದೇವಸ್ಥಾನ ಅರ್ಚಕರಾದ ಪ್ರಭಾಕರ ಅಡಿಗ, ಲಕ್ಷ್ಮಿನಾರಾಯಣ ಅಡಿಗ, ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, “ಉದಯವಾಣಿ’ ಸಹ ಉಪಾಧ್ಯಕ್ಷ ಆನಂದ್‌ ಕೆ., ಪ್ರಮುಖರಾದ ಪ್ರೊ| ಎಂ.ಬಿ. ಪುರಾಣಿಕ್‌, ಕೆ.ಎಸ್‌. ಕಲ್ಲೂರಾಯ, ಕಿರಣ್‌ ಜೋಗಿ, ತಾರಾನಾಥ ಶೆಟ್ಟಿ, ಮಹೇಶ ಮೂರ್ತಿ, ವಿನಯ ಆಚಾರ್‌, ಮಟ್ಟಿ ಲಕ್ಷ್ಮಿನಾರಾಯಣ ರಾವ್‌ ಮೊದಲಾದವರು ಉಪಸ್ಥಿತರಿದ್ದರು.

Shree-Krishnaಕಲ್ಕೂರ ಪ್ರತಿಷ್ಠಾನ ಅಧ್ಯಕ್ಷ ಎಸ್‌. ಪ್ರದೀಪ ಕುಮಾರ್‌ ಕಲ್ಕೂರ ಪ್ರಸ್ತಾವನೆಧಿಗೈದು ಸ್ವಾಗತಿಸಿದರು. ಸುಧಾಕರ ರಾವ್‌ ಪೇಜಾವರ ವಂದಿಸಿದರು. ಕದ್ರಿ ನವನೀತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆ ಬೆಳೆಸುವ ಪ್ರಯತ್ನವಾಗಿ ಮತ್ತು ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಬೆಳೆಸುವ ಸದುದ್ದೇಶದಿಂದ ಈ ಸ್ಪರ್ಧೆ ಆಯೋಜಿಸಿಕೊಂಡು ಬರಧಿಲಾಗಿದೆ. ಪುಟಾಣಿ ಮನಸ್ಸುಧಿಗಳಲ್ಲಿ ಶ್ರೀ ಕೃಷ್ಣನ ಸ್ವರೂಪ ಕಂಡುಕೊಳ್ಳುವ, ಆ ಮೂಲಕ ಸಮಾಜದಲ್ಲಿ ಧಾರ್ಮಿಕ ಜಾಗೃತಿ ಮೂಡಿಸುವ ವಿಶೇಷ ಪ್ರಯತ್ನ ನಡೆಸಲಾಗಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ ಅವರು ತಿಳಿಸಿದರು.

Shreekrishna

Shreekrishna

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English