ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿದ್ದ ಆರೋಪಿ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

12:31 PM, Tuesday, August 30th, 2016
Share
1 Star2 Stars3 Stars4 Stars5 Stars
(No Ratings Yet)
Loading...

PFI-activistsಮಂಗಳೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿದ್ದ ಆರೋಪಿ ಬಿಡುಗಡೆಗೆ ಆಗ್ರಹಿಸಿ ನಗರ ಪೊಲೀಸ್ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪಿಎಫ್ಐ ಕಾರ್ಯಕರ್ತರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.

ಜಿಲ್ಲೆಯ ವಾಮಂಜೂರಿನಲ್ಲಿ ಕೊಲೆಗೀಡಾದ ಚರಣ್ ಪೂಜಾರಿ ಕೊಲೆ ವಿಚಾರಣೆಯ ಸಲುವಾಗಿ ಸೈಫುಲ್ಲಾ ಎಂಬಾತನನ್ನು ಬಂಧಿಸಲಾಗಿತ್ತು. ಆರೋಪಿಯು ಪಿಎಫ್ಐ ಸಂಘಟನೆ ನಾಯಕನಾಗಿದ್ದು, ಆತನ ಬಿಡುಗಡೆಗಾಗಿ ಭಾನುವಾರ ಪಿಎಫ್ಐ ಸಂಘಟನೆಯವರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಲೆತ್ನಿಸಿದರು.

ಪ್ರತಿಭಟನೆ ವೇಳೆ ಹೆಲ್ಮೆಟ್ ರಹಿತವಾಗಿ ಮತ್ತು ಒನ್‌ವೇನಲ್ಲಿ ಸಂಚರಿಸುತ್ತಿದ್ದ ಪ್ರತಿಭಟನಕಾರರಿಗೆ ಪೊಲೀಸರು ದಂಡ ವಿಧಿಸಿದ್ದು ಅವರಿಗೆ ಇರಿಸುಮುರಿಸಾಗಿತ್ತು.

ಇದರಿಂದಾಗಿ ರೊಚ್ಚಿಗೆದ್ದ ಪಿಎಫ್ಐ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ತೀವ್ರ ವಾಗ್ವಾದ ನಡೆಯಿತು. ಪರಿಸ್ಥಿತಿ ವಿಕೋಪಕ್ಕೆ ತೆರಳುವುದನ್ನು ಅರಿತ ಪೊಲೀಸರು ಲಾಠಿಪ್ರಹಾರ ನಡೆಸಿ, ಪಿಎಫ್ಐ ಪ್ರಮುಖರನ್ನು ವಶಕ್ಕೆ ಪಡೆದರು.

ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಮೂರು ಕೆಎಸ್‌ರ್‌ಪಿಸಿ ತುಕಡಿ ಹಾಗೂ ಸ್ಥಳೀಯ ಪೊಲೀಸರನ್ನು ನಿಯೋಜಿಸಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English