[1]ಮಂಗಳೂರು: ಮಂಗಳೂರು ಭಾಗದ ರೈಲ್ವೆ ಹಳಿ ದ್ವಿಪಥ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ 327.00 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಮಂಗಳೂರು ಜಂಕ್ಷನ್ನಿಂದ ಪಣಂಬೂರು ವರೆಗಿನ ಒಟ್ಟು 19 ಕಿ.ಮೀ ದ್ವಿಪಥ ಕಾಮಗಾರಿಗೆ ರೂ.327.00 ಕೋಟಿ ಅನುದಾನ ಈಗಾಗಲೇ ಬಿಡುಗಡೆಯಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಹೆಚ್ಚುವರಿಯಾಗಿ ಈ ಕಾಮಗಾರಿಗೆ 2016-17ನೇ ಸಾಲಿಗೆ 100.00ಕೋಟಿ ರೂ. ಅನುದಾನವನ್ನು ಕಾಯ್ದಿರಿಸಲಾಗಿದೆ ಎಂದರು.
ಇನ್ನು ನೇತ್ರಾವತಿ ಕ್ಯಾಬಿನ್ನಿಂದ ಮಂಗಳೂರು ಕೇಂದ್ರ ರೈಲು ನಿಲ್ದಾಣದವರೆಗಿನ 1.5 ಕಿ.ಮೀ ಹಳಿಗಳ ದ್ವಿಪಥ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಈಗಾಗಲೇ ರೂ.18.93 ಕೋಟಿ ಅನುದಾನ ಬಿಡುಗಡೆಯಾಗಿದೆ. ರೈಲು ಹಳಿಗಳ ದ್ವಿಪಥ ಕಾಮಗಾರಿಯಿಂದ ಸುಗಮ ಸಂಚಾರಕ್ಕೆ ಅನುಕೂಲವಾಗುವುದರೊಂದಿಗೆ ಪ್ರಯಾಣಿಕರ ಸಮಯವೂ ಉಳಿತಾಯವಾಗಲಿದೆ ಎಂದು ಸಂಸದ ಕಟೀಲ್ ತಿಳಿಸಿದ್ದಾರೆ.