ಸಿದ್ದರಾಮಯ್ಯ,ಡಿವಿಎಸ್‌ ಮತ್ತು ಮೊಯ್ಲಿ ಅವರಿಗೆ ಕ್ರೀಡಾಪಟುಗಳಿಗೆ ನೀಡುವ ಖೇಲ್‌ ರತ್ನ ಪ್ರಶಸ್ತಿ ಕೊಡಬೇಕು: ಪೂಜಾರಿ

4:30 PM, Saturday, September 3rd, 2016
Share
1 Star2 Stars3 Stars4 Stars5 Stars
(No Ratings Yet)
Loading...

Janardana-poojaryಮಂಗಳೂರು : ಕಾಂಗ್ರೆಸ್‌ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರು ಮತ್ತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸುದ್ದಿಗೋಷ್ಠಿ ನಡೆಸಿ ಕಿಡಿಕಾರಿದ್ದಾರೆ.

ನೇತ್ರಾವತಿ ನದಿ ತಿರುವು ಯೋಜನೆಯನ್ನು ವಿರೋಧಿಸಿ ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯನ್ನುದ್ದೇಸಿ ಮಾತನಾಡಿದ ಪೂಜಾರಿ ಅವರು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ, ಸಂಸದ ವೀರಪ್ಪ ಮೊಯ್ಲಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದರು.

ಎತ್ತಿನಹೊಳೆ ಯೋಜನೆಯನ್ನು ಅನುಷ್ಠಾನಕ್ಕೆ ತರುವಲ್ಲಿ ಬದ್ಧರಾಗಿರುವ ಸಿದ್ದರಾಮಯ್ಯನವರು ಯೋಜನೆಗೆ ಅಡ್ಡ ಬಂದರೆ ಅವರನ್ನು ನನ್ನ ಬಳಿ ಕಳುಹಿಸಿ ನಾನು ಉತ್ತರಿಸುತ್ತೇನೆ ಎಂದಿದ್ದಾರೆ ಅವರು ಮಹಾನ್‌ ಸುಳ್ಳುಗಾರ ಎಂದರು.

ಸಿಎಂ ಕರೆದ ಸಭೆಯಲ್ಲಿ ಕರಾವಳಿ ಭಾಗದಿಂದ ಮುಖ್ಯಮಂತ್ರಿಗಳಾಗಿದ್ದ ಸದಾನಂದ ಗೌಡ ಮತ್ತು ಮೊಯ್ಲಿ ಅವರು ಭಾಗಿಯಾಗಿ ಯೋಜನೆ ಕಾರ್ಯಗತಗೊಳಿಸಲು ಮುಂದಗಿದ್ದಾರೆ ಮೂವರೂ ಸೇರಿ ಕರಾವಳಿಯನ್ನು ಮರಭೂಮಿ ಮಾಡಲು ಹೊರಟಿದ್ದಾರೆ ಎಂದರು.

ಜಿಲ್ಲೆಯ ಜನತೆಗೆ ದ್ರೋಹ ಬಗೆದಿರುವ ಸಿಎಂ ಸಿದ್ದರಾಮಯ್ಯ,ಡಿವಿಎಸ್‌ ಮತ್ತು ಮೊಯ್ಲಿ ಅವರಿಗೆ ಕ್ರೀಡಾಪಟುಗಳಿಗೆ ನೀಡುವ ಖೇಲ್‌ ರತ್ನ ಪ್ರಶಸ್ತಿ ಕೊಡಬೇಕು ಎಂದು ವ್ಯಂಗ್ಯವಾಡಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English