ಸ್ನಾನ ಮಾಡಲು ತೆರಳಿದ್ದ ಯುವಕನೋರ್ವ ನೇತ್ರಾವತಿ ನದಿಯಲ್ಲಿ ಮುಳುಗಿ ಸಾವು

12:12 PM, Tuesday, September 6th, 2016
Share
1 Star2 Stars3 Stars4 Stars5 Stars
(No Ratings Yet)
Loading...

Rajanikanthಬಂಟ್ವಾಳ: ಸ್ನೇಹಿತರೊಂದಿಗೆ ಸ್ನಾನ ಮಾಡಲು ತೆರಳಿದ್ದ ಯುವಕನೋರ್ವ ಇಲ್ಲಿನ ಬಿ.ಸಿ. ರೋಡ್‌‌ ಸಮೀಪ ನೇತ್ರಾವತಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ.

ಮಂಗಳೂರು ಶ್ರೀನಿವಾಸ್ ಕಾಲೇಜಿನ ದ್ವಿತೀಯ ಬಿಬಿಎಂ ವಿದ್ಯಾರ್ಥಿಯಾಗಿದ್ದ ನಂತೂರು ನಿವಾಸಿ ರಜನಿಕಾಂತ್ (25) ಎಂಬಾತನೆ ಮೃತ ಯುವಕ. ಈತ ಸ್ನೇಹಿತರೊಂದಿಗೆ ನದಿಯ ಆಳ ತಿಳಿಯದೆ ಸ್ನಾನ ಮಾಡಲು ಇಳಿದಿದ್ದು ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾಧಿಕಾರಿ ನಂದಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English