ಕಾವೇರಿ ಕುರಿತ ಸುಪ್ರೀಂ ಕೋರ್ಟ್ ತೀರ್ಪು ತರ್ಕಹೀನ ಮತ್ತು ಅವೈಜ್ಞಾನಿಕ: ಬಿಎಸ್‌ವೈ

9:54 AM, Tuesday, September 13th, 2016
Share
1 Star2 Stars3 Stars4 Stars5 Stars
(No Ratings Yet)
Loading...

b-s-yeddyurappaಬೆಂಗಳೂರು: ಕಾವೇರಿ ನದಿ ನೀರು ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪು ತರ್ಕಹೀನ ಮತ್ತು ಅವೈಜ್ಞಾನಿಕ. ತೀರ್ಪಿನಿಂದ ಕರ್ನಾಟಕ ಮತ್ತಷ್ಟು ಸಂಕಷ್ಟಕ್ಕೀಡಾಗಿದ್ದು, ತೀರ್ಪು ಅರ್ಥವಾಗದ ಸಂಗತಿಯಾಗಿದೆ ಎಂದು ಪ್ರಕಟಣೆಯಲ್ಲಿ ಯಡಿಯೂರಪ್ಪ ತಿಳಿಸಿದ್ದಾರೆ.

ಎರಡೂ ರಾಜ್ಯಗಳ ವಸ್ತು ಸ್ಥಿತಿ ಅರಿಯಲು ತಜ್ಞರ ತಂಡ ಕಳುಹಿಸಬೇಕಿತ್ತು. ಅದ್ಯಾವುದನ್ನೂ ಮಾಡದೆ ತೀರ್ಪು ನೀಡಿರುವುದು ಸರಿಯಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ಆದ್ಯ ಕ್ರಮ ಕೈಗೊಳ್ಳಬೇಕು. ಕನ್ನಡಿಗರು ಶಾಂತಿಪ್ರಿಯರು. ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English