- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಸಹಜ ಸ್ಥಿತಿಗೆ ಮರಳಿದ ಮಹಾನಗರ: ಕರ್ಫ್ಯೂ ಹಿಂಪಡೆದ ಪೊಲೀಸರು

bangalore-normalcy [1]ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ನಗರದಲ್ಲಿ ನಡೆದ ಹಿಂಸಾಚಾರದ ಪರಿಣಾಮ ಕರ್ಫ್ಯೂ ಹೇರಲಾಗಿತ್ತು. ಆದ್ರೆ ಮಹಾನಗರ ಇಂದು ಯಥಾಸ್ಥಿತಿಗೆ ಮರಳುತ್ತಿರುವುದರಿಂದ ಕರ್ಫ್ಯೂವನ್ನ ಪೊಲೀಸರು ಹಿಂಪಡೆದಿದ್ದಾರೆ.

ಇದರ ಜೊತೆಗೆ ಬೆಳಗ್ಗೆ 9 ಗಂಟೆಯಿಂದ ಕಂಡಲ್ಲಿ ಗುಂಡು ಆದೇಶವನ್ನೂ ಸಹ ವಾಪಸ್ ಪಡೆದಿದ್ದಾರೆ. ನಗರದ ಹದಿನಾರು ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಕರ್ಫ್ಯೂ ವಿಧಿಸಲಾಗಿತ್ತು, ಪರಿಸ್ಥಿತಿ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಕರ್ಫ್ಯೂವನ್ನು ಪೊಲೀಸರು ಹಿಂಪಡೆದಿದ್ದಾರೆ. ಆದರೆ ಇನ್ನೂ ನಗರದಾದ್ಯಂತ ನಿಷೇಧಾಜ್ಞೆ ಮುಂದುವರೆಸಲಾಗಿದೆ.

ಮುಂದಿನ ಪರಿಸ್ಥಿತಿ ನೋಡಿಕೊಂಡು ನಿಷೇಧಾಜ್ಞೆಯನ್ನು ಹಿಂಪಡೆಯಲು ಪೊಲೀಸರು ನಿರ್ಧರಿಸಿದ್ದಾರೆ ಎಂದು ಬೆಂಗಳೂರು ಪೊಲೀಸರು ಅಧಿಕೃತ ಟ್ವಿಟ್ಟರ್ ಖಾತೆ ಮೂಲಕ ಪೊಲೀಸರು ಸ್ಪಷ್ಟಪಡಿಸಿದ್ದಾರೆ.