ಮೈಸೂರು: ನವರಾತ್ರಿಯಲ್ಲಿ ರಾಜವಂಶಸ್ಥರಿಂದ ಅರಮನೆಯಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು ನಡೆಯುವ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಕಾಲ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಅರಮನೆ ಪ್ರವೇಶ ನಿರ್ಬಂಧಿಸಲಾಗಿದೆ.
ಅ. 1ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2.30ರವರೆಗೆ ಖಾಸಗಿ ದರ್ಬಾರ್ ಹಾಗೂ ಇತರ ಪೂಜಾ ಕೈಂಕರ್ಯಗಳು ನಡೆಯಲಿವೆ. ಹಾಗಾಗಿ ಅರಮನೆ ಪ್ರವೇಶಕ್ಕೆ ನಿಷೇಧ ಹೇರಲಾಗಿದ್ದು, 2.30ರ ನಂತರ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಪ್ರವೇಶವಿರುತ್ತದೆ.
ಅಕ್ಟೋಬರ್ 10ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಅರಮನೆಯಲ್ಲಿ ಆಯುಧ ಪೂಜೆ ನಡೆಯಲಿದ್ದು, 1.30ರ ನಂತರ ಸಾರ್ವಜನಿಕರಿಗೆ ಪ್ರವೇಶ ಅವಕಾಶ ಇರುತ್ತದೆ.
ಅಕ್ಟೋಬರ್ 11ರಂದು ವಿಜಯ ದಶಮಿ ಆಚರಣೆ ಹಿನ್ನೆಲೆಯಲ್ಲಿ ಸಂಪೂರ್ಣ ಪ್ರವೇಶವಿರುವುದಿಲ್ಲ. ಅ.20ರ ಬೆಳಗ್ಗೆ 10 ಗಂಟೆಯಿಂದ 1.30ರವರೆಗೆ ಸಿಂಹಾಸನವನ್ನ ಬಿಚ್ಚಿಡುವುದರಿಂದ 1.30ರ ನಂತರ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಅರಮನೆ ಪ್ರವೇಶಕ್ಕೆ ಅವಕಾಶ ಇರುತ್ತದೆ.
Click this button or press Ctrl+G to toggle between Kannada and English