- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕಾರು ಅಪಘಾತದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಹಿತ 5 ಮಂದಿಗೆ ಗಾಯ

car- [1]ಕಾಸರಗೋಡು: ಕಾರು ನಿಯಂತ್ರಣ ತಪ್ಪಿ ಮಗುಚಿ ಸಂಭವಿಸಿದ ಅಪಘಾತದಲ್ಲಿ ಬಿಜೆಪಿ ನೇತಾರರು ಗಾಯಗೊಂಡಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್, ಉದುಮ ಮಂಡಲ ಕಾರ್ಯದರ್ಶಿ ದಿಲೀಪ್ ಕುಮಾರ್, ಕಾಸರಗೋಡು ಮಂಡಲ ಅಧಕ್ಷ ಸುಧಾಮ ಗೋಸಾಡ, ಅಡೂರಿನ ಪ್ರದೀಪ್, ಚಾಲಕ ಕುಂಬಳೆಯ ಗುರುಪ್ರಸಾದ್ ಎಂಬವರು ಗಾಯಗೊಂಡಿದ್ದಾರೆ. ಇವರನ್ನು ವಿದ್ಯಾನಗರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಸೋಮವಾರ ಮುಂಜಾನೆ 4 ಗಂಟೆ ವೇಳೆ ಪಳ್ಳಿಕೆರೆ ಚೇಟುಕುಂಡ್ ಎಂಬಲ್ಲಿ ಅಪಘಾತ ಸಂಭವಿಸಿದೆ. ಕಲ್ಲಿಕೋಟೆಯಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಪರಿಷತ್ ಸಮಾವೇಶದಲ್ಲಿ ಭಾಗವಹಿಸಿ ಶ್ರೀಕಾಂತ್ ಹಾಗೂ ಮತ್ತಿತರರು ಮರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

car- [2]ಕಾರು ಚೇಟುಕುಂಡ್‌ಗೆ ತಲುಪಿದಾಗ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಅಪಘಾತದ ಸದ್ದು ಕೇಳಿ ತಲುಪಿದ ಪರಿಸರ ನಿವಾಸಿಗಳು ಗಾಯಾಳುಗಳನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ಮನೆಗೆ ತಲಪಿಸಲಾಯಿತು.