ಭಾಸ್ಕರ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು

1:11 PM, Monday, October 3rd, 2016
Share
1 Star2 Stars3 Stars4 Stars5 Stars
(No Ratings Yet)
Loading...

baskar-shetty-murder-caseಉಡುಪಿ: ಉದ್ಯಮಿ ಭಾಸ್ಕರ ಶೆಟ್ಟಿ ಹತ್ಯೆ ಪ್ರಕರಣದ ಸಾಕ್ಷ್ಯನಾಶ ಮಾಡಿದ್ದ ಆರೋಪದಲ್ಲಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ಉಡುಪಿ ಜಿಲ್ಲಾ ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಶ್ರೀನಿವಾಸ ಭಟ್ಟ ಮತ್ತು ರಾಘವೇಂದ್ರ ಎಂಬುವವರು ಕೊಲೆ ಪ್ರಕರಣದ ಸಾಕ್ಷ್ಯನಾಶ ಮಾಡಿದ್ದ ಆರೋಪದಲ್ಲಿ ಬಂಧಿತರಾಗಿದ್ದರು. ಭಾನುವಾರ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.

ಶ್ರೀನಿವಾಸ್ ಭಟ್‌‌ ಕೊಲೆ ಪ್ರಕರಣದ ಮೂರನೇ ಆರೋಪಿಯಾಗಿರುವ ನಿರಂಜನ್ ಭಟ್‌‌ ಅವರ ತಂದೆಯಾಗಿದ್ದಾರೆ.ಇನ್ನು ರಾಘವೇಂದ್ರ ನಿರಂಜನ್ ಭಟ್‌‌ನ ಕಾರು ಚಾಲಕನಾಗಿದ್ದ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English