- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಆಟೋ ರಿಕ್ಷಾ ಹಾಗೂ ಮಿನಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸಹೋದರರಿಬ್ಬರ ಸಾವು

accident [1]ಕಾರ್ಕಳ: ಆಟೋ ರಿಕ್ಷಾ ಹಾಗೂ ಮಿನಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸಹೋದರರಿಬ್ಬರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಹೆಬ್ರಿಯಲ್ಲಿ ನಡೆದಿದೆ.

ಶಿವಪುರ ಕಾಚಿಲ ನಿವಾಸಿ, ರಿಕ್ಷಾ ಚಾಲಕ ಗುರುಪ್ರಸಾದ್ ಹಾಗೂ ವಸಂತ್ ದುರ್ಘಟನೆಯಲ್ಲಿ ಮೃತಪಟ್ಟ ಸಹೋದರರು. ಶಿವಪುರದಿಂದ ಹೆಬ್ರಿ ಕಡೆಗೆ ತೆರಳುತ್ತಿದ್ದ ರಿಕ್ಷಾ, ಮಿನಿ ಬಸ್ಸನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ರಿಕ್ಷಾದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಗುರುಪ್ರಸಾದ್ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಗುರುಪ್ರಸಾದ್ ಅಣ್ಣ ವಸಂತ್‌ಗೂ ಗಂಭೀರ ಗಾಯಗಳಾಗಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.

ಈ ಕುರಿತು ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.