ಕೊಲೆಗೈದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಮೃತದೇಹ ಪತ್ತೆ

3:30 PM, Saturday, November 5th, 2016
Share
1 Star2 Stars3 Stars4 Stars5 Stars
(No Ratings Yet)
Loading...

Bunder murderಮಂಗಳೂರು: ಕೊಲೆಗೈದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಮೃತದೇಹ ಹಳೆ ಬಂದರಿನ ರೈಲ್ವೆ ಸಿಮೆಂಟ್ ಗೋದಾಮಿನಲ್ಲಿ ಪತ್ತೆಯಾಗಿದೆ.

ಕೊಲೆಗೀಡಾದ ವ್ಯಕ್ತಿ ಕೂಲಿ ಕಾರ್ಮಿಕ ಎನ್ನಲಾಗಿದ್ದು, ಮುಖ ಜಜ್ಜಿ ಹೋಗಿದ್ದು, ಇದೊಂದು ಕೊಲೆ ಎಂದು ಶಂಕಿಸಲಾಗಿದೆ. ಕಳೆದ ತಡರಾತ್ರಿ ಕೊಲೆ ನಡೆದಿರಬಹುದು ಎನ್ನಲಾಗಿದೆ.

ಎಸಿಪಿ ಶ್ರುತಿ ಎನ್. ಎಸ್., ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವೆನ್‍ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ.

ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English