ಶಿಕ್ಷಣ ಸಚಿವರು ತಕ್ಷಣ ರಾಜೀನಾಮೆ ನೀಡಬೇಕು: ಸುಲೋಚನಾ ಜಿ.ಕೆ.ಭಟ್

12:48 PM, Saturday, November 12th, 2016
Share
1 Star2 Stars3 Stars4 Stars5 Stars
(No Ratings Yet)
Loading...

bjp-mahila-morcha-ಮಂಗಳೂರು: ನೈತಿಕ ಮೌಲ್ಯವನ್ನು ಎತ್ತಿ ಹಿಡಿಯಬೇಕಾದ ಶಿಕ್ಷಣ ಸಚಿವರು ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮದಲ್ಲಿ ಯುವತಿಯೋರ್ವಳ ಅರೆನಗ್ನ ಚಿತ್ರ ವೀಕ್ಷಿಸುವ ಮೂಲಕ ಸಮಾಜವೇ ತಲೆತಗ್ಗಿಸುವ ಕೆಲಸ ಮಾಡಿದ್ದಾರೆ. ಅವರು ತಕ್ಷಣ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು.

ರಾಜೀನಾಮೆ ನೀಡದಿದ್ದರೆ ಮುಖ್ಯಮಂತ್ರಿಯವರೇ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಬಿಜೆಪಿ ರಾಜ್ಯ ಸಹವಕ್ತಾರೆ ಸುಲೋಚನಾ ಜಿ.ಕೆ.ಭಟ್ ಆಗ್ರಹಿಸಿದ್ದಾರೆ.

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅರೆನಗ್ನ ಚಿತ್ರಗಳ ವೀಕ್ಷಣೆಯಲ್ಲಿ ಮಗ್ನವಾಗಿದ್ದ ಸೇಠ್ ಅವರು ಪರೋಕ್ಷವಾಗಿ ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

bjp-mahila-morcha-ಸಮಾಜಕ್ಕೆ, ವಿದ್ಯಾರ್ಥಿ ಸಮೂಹಕ್ಕೆ ಮಾದರಿಯಾಗಬೇಕಿದ್ದ ಶಿಕ್ಷಣ ಸಚಿವರು, ತಮ್ಮ ವಿಕೃತ ಮನಸ್ಸಿನ ಮೂಲಕ ಅಗೌರವ ತರುವ ಕೆಲಸ ಮಾಡಿದ್ದಾರೆ. ಅವರು ಶಿಕ್ಷಣ ಸಚಿವರಾಗಿ ಮುಂದುವರಿಯುವುದರಲ್ಲಿ ಅರ್ಥವಿಲ್ಲ. ತಕ್ಷಣ ಅವರು ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ಬಿಜೆಪಿ ತೀವ್ರ ಹೋರಾಟ ಕೈಗೊಳ್ಳಲಿದೆ ಎಂದು ಎಚ್ಚರಿಸಿದರು.

ಒಂದೆಡೆ ಕಾಂಗ್ರೆಸ್ ರಾಜ್ಯ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು, ಸೇಠ್ ಅವರ ಹೀನ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾರೆ. ಇದು ಕಾಂಗ್ರೆಸ್‌‌ನ ಮಾನಸಿಕತೆಯನ್ನು ತೋರಿಸುತ್ತದೆ ಎಂದು ಅವರು ಹೇಳಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English