ದೇಶದಲ್ಲಿ ನಿರ್ಮಾಣವಾಗಿರುವ ಆರ್ಥಿಕ ತುರ್ತು ಪರಿಸ್ಥಿತಿಗೆ ಮೋದಿಯೇ ಕಾರಣ, ಅವರೇ ಜನತೆಗೆ ಉತ್ತರ ನೀಡಲಿ: ಪೂಜಾರಿ

10:45 AM, Wednesday, November 16th, 2016
Share
1 Star2 Stars3 Stars4 Stars5 Stars
(No Ratings Yet)
Loading...

janardana-poojaryಮಂಗಳೂರು: ಸದ್ಯ ದೇಶದಲ್ಲಿ ನಿರ್ಮಾಣವಾಗಿರುವ ಆರ್ಥಿಕ ತುರ್ತು ಪರಿಸ್ಥಿತಿಯಂತಹ ವಾತಾವರಣಕ್ಕೆ ಪ್ರಧಾನಿ ನರೇಂದ್ರ ಮೋದಿಯೇ ಕಾರಣ. ಈ ಪರಿಸ್ಥಿತಿಗೆ ವಾಸ್ತವ ಕಾರಣ ಏನು ಎಂಬುದನ್ನು ಅವರೇ ಜನತೆಗೆ ಉತ್ತರ ನೀಡಲಿ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಜನಾರ್ದನ ಪೂಜಾರಿ ಹೇಳಿದರು.

ಇಂದು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಪ್ಪುಹಣ ತಡೆಯಲು ದೇಶದ ಆದಾಯ ತೆರಿಗೆ ಕಾನೂನು ಇದೆ. ಸೆಕ್ಷನ್‌‌ 276 ‘ಎ’ ಮತ್ತು 276 ‘ಬಿ’ಯಲ್ಲಿ ದೇಶದಲ್ಲಿ ಕಪ್ಪುಹಣ ನಿಯಂತ್ರಿಸಲು ಯಾವ ಕ್ರಮ ಕೈಗೊಳ್ಳಬಹುದು ಎನ್ನುವ ಬಗ್ಗೆ ತಿಳಿಸಲಾಗಿದೆ. ಇದುವರೆಗೆ ಎಷ್ಟು ಜನರ ವಿರುದ್ಧ ಕಪ್ಪುಹಣ ಇದೆ ಎಂದು ಪ್ರಕರಣ ದಾಖಲಿಸಲಾಗಿದೆ? ಎಷ್ಟು ಜನರನ್ನು ಜೈಲಿಗೆ ಕಳುಹಿಸಲಾಗಿದೆ ಎನ್ನುವ ಪ್ರಶ್ನೆಗೆ ಮೋದಿ ಉತ್ತರಿಸಲಿ.

ಪ್ರಸಕ್ತ ದೇಶದಲ್ಲಿ 1000 ಮತ್ತು 500 ರೂ.ಗಳ ನೋಟನ್ನ ಸರ್ಕಾರ ಅಮಾನ್ಯಗೊಳಿಸುವ ಸಂದರ್ಭದಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಆದೇಶ ಮಾಡಲಾಗಿದೆ. ಚಿಲ್ಲರೆ ಸಮಸ್ಯೆ ಬಗೆಹರಿಸದೆ ಇರುವುದರಿಂದ ರೈತರು, ಕಾರ್ಮಿಕರು, ತರಕಾರಿ ವ್ಯಾಪಾರಿಗಳು ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ಬೀದಿ ಬೀದಿಗಳಲ್ಲಿ ಎಟಿಎಂ, ಬ್ಯಾಂಕ್‌ಗಳ ಮುಂದೆ ಕ್ಯೂ ನಿಲ್ಲುವಂತಾಗಿದೆ ಎಂದು ಜನಾರ್ದನ ಪೂಜಾರಿ ಹೇಳಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English