ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಕಾರ್ತಿಕ ಲಕ್ಷ ದೀಪೋತ್ಸವವು ಇಂದಿನಿಂದ ಆರಂಭ

11:31 AM, Thursday, November 24th, 2016
Share
1 Star2 Stars3 Stars4 Stars5 Stars
(No Ratings Yet)
Loading...

laksha-deepotsavaಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಕಾರ್ತಿಕ ಲಕ್ಷ ದೀಪೋತ್ಸವವು ಇಂದಿನಿಂದ ಆರಂಭವಾಗಲಿದೆ. ಶ್ರೀ ಮಂಜುನಾಥ ಸ್ವಾಮಿಯ ಹೊಸಕಟ್ಟೆ ಉತ್ಸವದ ಮೂಲಕ ಲಕ್ಷ ದೀಪೋತ್ಸವ ಪ್ರಾರಂಭವಾಗಲಿದೆ.

ಧರ್ಮಸ್ಥಳದಲ್ಲಿರುವ ಎಸ್‌‌‌ಡಿಎಂ ಪ್ರೌಢಶಾಲಾ ಕ್ರೀಡಾಂಗಣದಲ್ಲಿ 39ನೇ ವರ್ಷದ ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ ಸಿಗಲಿದೆ. ದ.ಕ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ವಸ್ತು ಪ್ರದರ್ಶನ ಉದ್ಘಾಟಿಸಲಿದ್ದಾರೆ.

ನಂತರ ನ. 27ರಂದು ನಡೆಯುವ ಸರ್ವಧರ್ಮ ಸಮ್ಮೇಳನದ 84ನೇ ಅಧಿವೇಶನವು ಶಿರಹಟ್ಟಿಯ ಫಕೀರ ಸಿದ್ದರಾಮ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಮ್ಮೇಳನವನ್ನು ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ ಉದ್ಘಾಟಿಸಲಿದ್ದಾರೆ.

ನ. 28ರಂದು ನಡೆಯುವ ಸಾಹಿತ್ಯ ಸಮ್ಮೇಳನದ 84ನೇ ಅಧಿವೇಶನವು ಬೆಂಗಳೂರಿನ ಖ್ಯಾತ ಸಾಹಿತಿ ಎಂ.ಎನ್. ವ್ಯಾಸರಾವ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಉದ್ಘಾಟಿಸಲಿದ್ದಾರೆ.

ನ. 29ರಂದು ನಡೆಯುವ ಶ್ರೀ ಚಂದ್ರನಾಥ ಸ್ವಾಮಿ ಸಮವಸರಣ ಪೂಜೆ ಮೂಲಕ ಲಕ್ಷ ದೀಪೋತ್ಸವ ಕಾರ್ಯಕ್ರಮಗಳು ಮುಕ್ತಾಯಗೊಳ್ಳಲಿವೆ. 6 ದಿನಗಳ ಕಾಲ ಕ್ಷೇತ್ರದಲ್ಲಿ ವಿವಿಧ ಸಾಹಿತ್ಯಿಕ, ಸಾಂಸ್ಕೃತಿಕ, ಮನೋರಂಜನಾ ಕಾರ್ಯಕ್ರಮಗಳು ವೈಭವದಿಂದ ಸಂಪನ್ನಗೊಳ್ಳಲಿವೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English