ಬಾಳಿಗಾ ಕೊಲೆ ಪ್ರಕರಣ: ಸುಪ್ರೀಂ ಕೋರ್ಟ್ ನರೇಶ್ ಶೆಣೈಗೆ ನೋಟಿಸ್

3:32 PM, Tuesday, November 29th, 2016
Share
1 Star2 Stars3 Stars4 Stars5 Stars
(No Ratings Yet)
Loading...

Naresh-shenoyಮಂಗಳೂರು: ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ನರೇಶ್ ಶೆಣೈಗೆ ಹೈಕೋರ್ಟ್ ನೀಡಿದ್ದ ಜಾಮೀನು ಪ್ರಶ್ನಿಸಿ ಬಾಳಿಗಾ ಕುಟುಂಬ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ಸ್ವೀಕರಿಸಿದೆ. ಈ ಸಂಬಂಧ ಸುಪ್ರೀಂ ನರೇಶ್ ಶೆಣೈಗೆ ನೋಟಿಸ್ ಜಾರಿ ಮಾಡಿದೆ.

ಬಾಳಿಗಾ ಹತ್ಯೆ ಪ್ರಕರಣದ ತನಿಖೆ ಪೂರ್ಣಗೊಳ್ಳುವ ಮೊದಲೇ ನರೇಶ್ ಶೆಣೈಗೆ ಹೈಕೋರ್ಟ್ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಬಾಳಿಗಾ ಅವರ ತಂದೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇಂದು ಸುಪ್ರೀಂ ಅರ್ಜಿ ಸ್ವೀಕರಿಸಿ, ಶೆಣೈಗೆ ನೋಟಿಸ್ ಜಾರಿ ಮಾಡಿದೆ ಎಂದು ವಿಚಾರವಾದಿ ಸಂಘದ ರಾಷ್ಟ್ರೀಯ ಅಧ್ಯಕ್ಷ ನರೇಂದ್ರ ನಾಯಕ್ ತಿಳಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English