ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯ ಅವಹೇಳನ ಪೋಸ್ಟ್ ಪ್ರಕರಣದ ತನಿಖೆಗೆ ಸಹಕರಿಸದ ಹಿನ್ನೆಲೆ ಮುಂಬೈನಲ್ಲಿರುವ ಫೇಸ್ಬುಕ್ ಕಚೇರಿಗೆ ಭೇಟಿ ನೀಡಿದ ಪೊಲೀಸರು, ಅಲ್ಲಿಯ ಸಿಬ್ಬಂದಿಗಳ ವಿಚಾರಣೆ ನಡೆಸಿದ್ದಾರೆ.
ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯ ಕುರಿತ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ ಫೇಸ್ಬುಕ್ ಅಸಹಕಾರ ತೋರಿದ ಹಿನ್ನೆಲೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.
ಮಂಗಳೂರು ಪೊಲೀಸರು ಹಾಗೂ ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಜಂಟಿಯಾಗಿ ಮುಂಬೈನಲ್ಲಿರುವ ಫೇಸ್ಬುಕ್ ಕಚೇರಿಗೆ ಭೇಟಿ ನೀಡಿ, ಸಿಬ್ಬಂದಿಯ ವಿಚಾರಣೆ ನಡೆಸಿದ್ದಾರೆ. ಈ ಸಂದರ್ಭ ಮುಂಬೈ ಪೊಲೀಸರು ಸಹಕಾರ ನೀಡಿದ್ದಾರೆ.
Click this button or press Ctrl+G to toggle between Kannada and English