ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸಿ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಮುದಾಯ ಆಸ್ಪತ್ರೆಗಳನ್ನು ಬಲಪಡಿಸುವಂತೆ ಒತ್ತಾಯಿಸಿ ಉಳ್ಳಾಲ ವಲಯ ಡಿವೈಎಫ್ಐ ಸಮಿತಿ ತೊಕ್ಕೊಟ್ಟು ಹೊಸ ಬಸ್ ನಿಲ್ದಾಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೇವಲ ಐದು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದು, ಸಮುದಾಯ ಆಸ್ಪತ್ರೆ ಎಲ್ಲಿದೆ ಎಂದು ಗೊತ್ತಿಲ್ಲ. ಈ ಕ್ಷೇತ್ರದಲ್ಲಿ ಖಾಸಗಿ ಆಸ್ಪತ್ರೆಗಳದ್ದೇ ಪ್ರಾಬಲ್ಯವಿದೆ ಎಂದರು.
ಎರಡೂವರೆ ಲಕ್ಷ ಜನರಿಗೆ ಕನಿಷ್ಠ 10 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಸಮುದಾಯ ಆಸ್ಪತ್ರೆಗಳ ಅವಶ್ಯಕತೆ ಇದೆ. ಸರ್ಕಾರದ ನೀತಿಯಂತೆ ಮೂರು ಸಮುದಾಯ ಆಸ್ಪತ್ರೆ ಮತ್ತು 10 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಕಾರ್ಯ ನಿರ್ವಹಿಸಬೇಕಿತ್ತು.
ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಇರುವುದು ಮೂರು ಮಾತ್ರ. ಇದನ್ನು ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂದರು.
Click this button or press Ctrl+G to toggle between Kannada and English