ತಂದೆಯೇ ಮಗನ ಮೇಲೆ ಗುಂಡು ಹಾರಿಸಿ ಬರ್ಬರ ಹತ್ಯೆ

12:51 PM, Wednesday, December 14th, 2016
Share
1 Star2 Stars3 Stars4 Stars5 Stars
(No Ratings Yet)
Loading...

Eranna-vittal-indiಬೆಳಗಾವಿ: ಬೈಲಹೊಂಗಲ ಸಮೀಪದ ನಯಾ ನಗರದಲ್ಲಿ ತಂದೆಯೇ ಮಗನ ಮೇಲೆ ಗುಂಡು ಹಾರಿಸಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ವೃತ್ತಿಯಲ್ಲಿ ಯೋಧನಾಗಿರುವ ಮಗನ ಮೇಲೆಯೇ ತಂದೆ ಫೈರಿಂಗ್‌ ಮಾಡಿದ್ದಾನೆ.

ಈರಣ್ಣ ವಿಠಲ ಇಂಡಿ (21) ತಂದೆಯ ಗುಂಡಿಗೆ ಬಲಿಯಾಗಿರುವ ಯೋಧ. ಮೃತಪಟ್ಟ ಯೋಧ ಬೆಂಗಳೂರಿನ ಎಂಇಸಿ ಸೆಂಟರ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಈರಣ್ಣನ ತಂದೆ ವಿಠಲ ಇಂಡಿ (68) ಎಂಬಾತ ಯೋಧನನ್ನು ಹತ್ಯೆ ಮಾಡಿದ್ದಾನೆ.

ಕಳೆದು ಒಂದು ವರ್ಷದ ಹಿಂದೆ ಈರಣ್ಣ ಭಾರತೀಯ ಸೈನ್ಯಕ್ಕೆ ಸೇರಿದ್ದ. ಬೆಂಗಳೂರಿನಿಂದ ನಿನ್ನೆ ರಾತ್ರಿ ಈರಣ್ಣ ನಯಾನಗರಕ್ಕೆ ಆಗಮಿಸಿದ್ದ. ರಾತ್ರಿ ಎಲ್ಲರೂ ಮನೆಯಲ್ಲಿದ್ದಾಗ ಮನೆಗೆ ಆಗಮಿಸಿ ಆರೋಪಿ ವಿಠಲ ಹೊಸ ವಾಹನ ಖರೀದಿಸಲು ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾನೆ. ಈ ವಿಚಾರವಾಗಿ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ.

Eranna-vittal-indiಆರೋಪಿ ವಿಠಲ ಇಂಡಿ ಹಾರಿಸಿದ ಗುಂಡಿಗೆ ಪುತ್ರ ಯೋಧ ಈರಣ್ಣ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈರಣ್ಣನ ಎದೆಗೆ ಎರಡೂ ಗುಂಡು ತಗುಲಿವೆ. ಘಟನೆಯಲ್ಲಿ ಈರಣ್ಣನ ತಾಯಿ ಅನುಸೂಯಾ(40)ಗೆ ಮೂರು ಗುಂಡು ಹಾಗೂ ಸಹೋದರಿ ಪ್ರೀತಿ (19) ಗೆ ಒಂದು ಗುಂಡು ಸಹ ತಗಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಆರೋಪಿ ವಿಠಲ ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹೊಳೆಯಿಂಗಳ ಗ್ರಾಮದವನು. ಕಳೆದ 21 ವರ್ಷಗಳ ಹಿಂದೆ ಬೈಲಹೊಂಗಲ ಪಟ್ಟಣದ ಸಮೀಪದಲ್ಲಿರುವ ನಯಾ ನಗರ ಗ್ರಾಮದ ಅನುಸೂಯಾ ಎಂಬುವರನ್ನು ಮದುವೆಯಾಗಿದ್ದ.

ಆರೋಪಿ ವಿಠಲಗೆ ಇಬ್ಬರು ಪತ್ನಿಯರಿದ್ದು, ಎರಡನೇ ಪತ್ನಿಗೆ ಆಸ್ತಿ ನೀಡುವಂತೆ ಮತ್ತು ಪುತ್ರನಿಗೆ ಹಣ ನೀಡುವಂತೆ ಪದೇ ಪದೇ ಪೀಡಿಸುತ್ತಿದ್ದ ಎಂದು ತಿಳಿದು ಬಂದಿದೆ.

ಘಟನೆ ಬಳಿಕ ಆರೋಪಿ ವಿಠಲ ಪರಾರಿಯಾಗಿದ್ದು, ಈ ಸಂಬಂಧ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English