- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಸಾಲ್ಮರದಲ್ಲಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

Mahammad Ashraf [1]ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಸಾಲ್ಮರದಲ್ಲಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಪೊಲೀಸರು, ಸುಮಾರು 15 ಸಾವಿರ ರೂಪಾಯಿ ಮೌಲ್ಯದ ಗಾಂಜಾ ಹಾಗೂ ಸಾಗಾಟಕ್ಕೆ ಬಳಸಿದ್ದ ಮಾರುತಿ ಓಮ್ನಿಯನ್ನು ವಶಕ್ಕೆ ಪಡೆದಿದ್ದಾರೆ.

ಮಹಮ್ಮದ್ ಅಶ್ರಫ್(37) ಗಾಂಜಾ ಸಾಗಣೆ ಪ್ರಕರಣದಡಿ ಬಂಧಿತನಾದ ವ್ಯಕ್ತಿ. ಗಾಂಜಾ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪುತ್ತೂರು ಪೊಲೀಸರು ಗುರುವಾರ ಸಂಜೆ ದಾಳಿ ನಡೆಸಿದಾಗ ಪಡ್ನೂರು ಗ್ರಾಮದ ಶಾಂತಿನಗರದ ಮಹಮ್ಮದ್ ಅಶ್ರಫ್ ಬಲೆಗೆ ಬಿದ್ದಿದ್ದಾನೆ. ಆತನ ಬಳಿ 500 ಗ್ರಾಂ ಗಾಂಜಾ ಪತ್ತೆಯಾಗಿದೆ.

ನಗರ ಠಾಣಾ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಿಎಸ್‍ಐ ಒಮನ್‌, ಪ್ರೊಬೆಷನರಿ ಪಿಎಸ್‍ಐ ಮಂಜುನಾಥ್, ಸಿಬಂದಿಗಳಾದ ಸ್ಕರಿಯ, ಕೃಷ್ಣಪ್ಪ, ರಾಧಾಕೃಷ್ಣ, ಪ್ರಶಾಂತ್ ಶೆಟ್ಟಿ, ಪ್ರಶಾಂತ್ ರೈ, ಮೋಹನ್ ತಂಡದಲ್ಲಿದ್ದರು.