[1]ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಪನೆ ಎಂಬಲ್ಲಿ ದುಷ್ಕರ್ಮಿಗಳು ಇಬ್ಬರು ಯುವಕರಿಗೆ ಚೂರಿ ಇರಿದು ಇಬ್ಬರು ಯುವಕರಿಗೆ ಚೂರಿ ಇರಿದು ಪರಾರಿಯಾಗಿದ್ದಾರೆ.
ಬಂಟ್ವಾಳ ತಾಲೂಕಿನ ಕೇಂದ್ರ ಸ್ಥಾನವಾದ ಬಿ.ಸಿ. ರೋಡ್ನಿಂದ ಪೊಳಲಿ ದೇವಸ್ಥಾನಕ್ಕೆ ತೆರಳುವ ಮಾರ್ಗಮಧ್ಯದಲ್ಲಿ ಇರುವ ಕಲ್ಪನೆ ಎಂಬಲ್ಲಿ ಬೈಕ್ನಲ್ಲಿ ಸಾಗುತ್ತಿದ್ದ ಮಲ್ಲೂರಿನ ಜುನೈದ್ ಮತ್ತು ಶಾಂತಿಯಂಗಡಿ ನಿವಾಸಿ ಸಿನಾನ್ ಎಂಬುವರ ಮೇಲೆ ದುಷ್ಕರ್ಮಿಗಳು ಚೂರಿ ಇರಿದು ಪರಾರಿಯಾಗಿದ್ದಾರೆ. ತಕ್ಷಣವೇ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೈಕಿನಲ್ಲಿ ಬಂದ ಮೂವರು ಇರಿದು ಪರಾರಿಯಾಗಿದ್ದು, ಇವರ ಶೋಧ ಕಾರ್ಯವನ್ನು ಪೊಲೀಸರು ನಡೆಸುತ್ತಿದ್ದಾರೆ. ಓರ್ವನ ಭುಜಕ್ಕೆ ಗಾಯವಾಗಿದ್ದು, ಮತ್ತೋರ್ವನ ಕುತ್ತಿಗೆಗೆ ಸಣ್ಣ ಗಾಯವಾಗಿದೆ. ಘಟನೆ ದಂಬಂಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.