ರೈ ಅವರಿಂದ ಏಕವಚನದಲ್ಲಿ ನಿಂದಿಸುವಷ್ಟು ಕೀಳುಮಟ್ಟದ ರಾಜಕಾರಣ ನಡೆಯುತ್ತಿದೆ: ವಿಜಯಕುಮಾರ್ ಶೆಟ್ಟಿ

3:49 PM, Thursday, December 29th, 2016
Share
1 Star2 Stars3 Stars4 Stars5 Stars
(No Ratings Yet)
Loading...

Yettinahole horata sdamithiಮಂಗಳೂರು: ದ.ಕ. ಜಿಲ್ಲಾ ಉಸ್ತವಾರಿ ಸಚಿವ ಬಿ.ರಮಾನಾಥ ರೈ ಅವರು ಬಾಲ ಬಿಚ್ಚಿದರೆ ಅವರ ಅನೇಕ ಸಂಗತಿಗಳನ್ನು ಬಯಲು ಮಾಡುತ್ತೇನೆ ಎಂದು ಮಾಜಿ ಶಾಸಕ, ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟದ ಮುಖಂಡ ವಿಜಯಕುಮಾರ್ ಶೆಟ್ಟಿ ಎಚ್ಚರಿಸಿದ್ದಾರೆ.

ಮಂಗಳೂರಿನಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈ ಅವರಿಂದ ಏಕವಚನದಲ್ಲಿ ನಿಂದಿಸುವಷ್ಟು ಕೀಳುಮಟ್ಟದ ರಾಜಕಾರಣ ನಡೆಯುತ್ತಿದೆ. ಎತ್ತಿನಹೊಳೆ ಯೋಜನೆ ಬಗ್ಗೆ ಸಿಎಂ ಸಮ್ಮಖದಲ್ಲಿ ನಡೆದ ಸಭೆಯು ಇಸ್ಪೀಟು ಕ್ಲಬ್ ನಡೆಸುವ ರೀತಿಯಲ್ಲಿ ನಡೆಸಲಾಗಿದೆ. ಮುಖ್ಯಮಂತ್ರಿಗಳು ನಮ್ಮನ್ನು ಮಂಕು ಮಾಡುವ ರೀತಿಯಲ್ಲಿ ವ್ಯವಸ್ಥಿತವಾಗಿ ಸಭೆ ನಡೆಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಹೋರಾಟ ಸಮಿತಿಯ ಮುಖಂಡ ಎಂ.ಜಿ.ಹೆಗ್ಡೆ, ಎತ್ತಿನಹೊಳೆ ಯೋಜನೆಯ ಬಗ್ಗೆ ಮುಖ್ಯಮಂತ್ರಿಗಳ ಮನೆಯಲ್ಲಿ ನಡೆದ ಸಭೆಯಲ್ಲಿ ಶಾಸಕರು, ಸಚಿವರು ರೌಡಿಗಳಂತೆ ವರ್ತಿಸಿದರು. ಸಚಿವರಾದ ರೈ, ಖಾದರ್, ಶಾಸಕ ಐವನ್ ಡಿಸೋಜ, ಮೊಹಿದಿನ್ ಬಾವಾ ನಮ್ಮ ಜಿಲ್ಲೆಯ ಪ್ರತಿನಿಧಿಗಳಾಗಿ ಜನರ ಹಿತ ರಕ್ಷಣೆಗೆ ಮುಂದಾಗಿಲ್ಲ. ಜಿಲ್ಲೆಯ ಬಗ್ಗೆ ಕಳಕಳಿ ಇಲ್ಲದವರು ಶಾಸಕರಾಗಲು ಅಯೋಗ್ಯರು ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English