ನಳಿನ್‌‌‌‌ ಕುಮಾರ್ ಕಟೀಲ್‌‌ ನೀಡಿರುವ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

2:40 PM, Tuesday, January 3rd, 2017
Share
1 Star2 Stars3 Stars4 Stars5 Stars
(No Ratings Yet)
Loading...

congressಮಂಗಳೂರು: ಉಳ್ಳಾಲದಲ್ಲಿ ನಡೆದ ಪ್ರತಿಭಟನೆಯೊಂದರಲ್ಲಿ ಸಂಸದ ನಳಿನ್‌‌‌‌ ಕುಮಾರ್ ಕಟೀಲ್‌‌ ನೀಡಿರುವ ಹೇಳಿಕೆಯನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈ ಸಂದರ್ಭ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಸಂಸದ ನಳಿನ್ ಅವರ ಹೇಳಿಕೆ ಜಿಲ್ಲೆಗೆ ಕಪ್ಪು ಚುಕ್ಕೆಯಾಗಿದೆ. ಬಿಜೆಪಿಗರು ಬೆಂಕಿ ಹಚ್ಚಿದರೆ ಕಾಂಗ್ರೆಸ್ ಪಕ್ಷ ನಂದಿಸುವ ಕಾರ್ಯ ಮಾಡಲಿದೆ ಎಂದರು.

ಪ್ರತಿಭಟನಾ ಸಭೆಯಲ್ಲಿ ಆಡಿದ್ದು ಸಂಸದರ ಗಿಮಿಕ್. ಯಾವುದೇ ಚುನಾವಣೆ ಬಂದಾಗಲೂ ಕೋಮುಗಲಭೆ ಹುಟ್ಟುಹಾಕುವಲ್ಲಿ ಬಿಜೆಪಿಗರದ್ದು ಎತ್ತಿದ ಕೈ. ಇದೇ ರೀತಿ ಸಂಸದರು ನಡೆದುಕೊಂಡಿದ್ದಾರೆ.

ಆ ಮೂಲಕ ಬಿಜೆಪಿಗರು ಒಂದು ಕಣ್ಣಿಗೆ ಸುಣ್ಣ ಮತ್ತೊಂದು ಕಣ್ಣಿಗೆ ಬೆಣ್ಣೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಇವರದ್ದು ಎರಡು ತಲೆ ಹಾವಿನಂತೆ ಎಂದು ಟೀಕಿಸಿದರು.

ಸಂಸದರಿಗೆ ನೈಜ ಕಾಳಜಿಯಿಲ್ಲ. ಹೀಗಾಗಿ ವಿನಾಯಕ ಬಾಳಿಗ ಕೊಲೆ ಪ್ರಕರಣ ಅಥವಾ ಮಾಜಿ ಸಚಿವ ಕೃಷ್ಣ ಪಾಲೆಮಾರ್ ಆಡಳಿತಾವಧಿಯಲ್ಲಿ ವಕೀಲ ಪ್ರೀತಂ ಕೊಲೆ ಪ್ರಕರಣಗಳ ಬಗ್ಗೆ ಮಾತನಾಡುತ್ತಿಲ್ಲ ಎಂದರು.

ಈ ವೇಳೆ ತಾಲೂಕು ಪಂಚಾಯತ್ ಅಧ್ಯಕ್ಷ ಮೊಹಮ್ಮದ್ ಮೋನು, ಪಾಲಿಕೆ ಸದಸ್ಯ ಪ್ರವೀಣ್‌‌ ಚಂದ್ರ ಆಳ್ವ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English