ಕಾರು ಹಾಗೂ ಟ್ರಕ್ ಡಿಕ್ಕಿ: ನಾಲ್ವರು ಸ್ಥಳದಲ್ಲೇ ದಾರುಣ ಸಾವು

11:00 AM, Wednesday, January 4th, 2017
Share
1 Star2 Stars3 Stars4 Stars5 Stars
(No Ratings Yet)
Loading...

Car-truck-collisionಮಂಗಳೂರು: ಬೆಳ್ಳಂಬೆಳಗ್ಗೆ ಕಾರು ಹಾಗೂ ಟ್ರಕ್ ನಡುವೆ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ತಂದೆ, ತಾಯಿ, ಮಗ ಹಾಗೂ ಓರ್ವ ಯುವಕ ಸೇರಿದಂತೆ ಒಟ್ಟು ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.

ಇಲ್ಲಿನ ಮಂಜೇಶ್ವರದ ಎ.ಜೆ ಆಂಗ್ಲ ಮಾಧ್ಯಮ ಶಾಲಾ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ 4ರ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಕೇರಳದ ತ್ರಿಶೂರು ನಿವಾಸಿಗರಾದ ಡಾ. ರಾಮನಾರಾಯಣ ಸಿಕೆ (52) ಪತ್ನಿ ವತ್ಸಲ, ಮಗ ರಂಜಿತ್‌ (20) ಮತ್ತು ಈತನ ಗೆಳೆಯ ನಿತಿನ್‌ (20) ಘಟನೆಯಲ್ಲಿ ಮತಪಟ್ಟ ದುರ್ದೈವಿಗಳು ಎಂದು ತಿಳಿದು ಬಂದಿದೆ.

ಮೃತ ರಂಜಿತ್‌ ಚಿಕ್ಕಮಗಳೂರಿನ ಆಯುರ್ವೇದಿಕ್ ಮೆಡಿಕಲ್‌ ಕಾಲೇಜಿನಲ್ಲಿ ಓದುತ್ತಿದ್ದನು. ರಜೆ ನಿಮಿತ್ತ ಕೇರಳಕ್ಕೆ ತೆರಳಿದ್ದನು.

ತ್ರಿಶೂರಿನಿಂದ ಮಂಗಳೂರು ಕಡೆ ಸಾಗುತ್ತಿದ್ದ ಕಾರು ಹಾಗೂ ಎದುರಿನಿಂದ ಆಗಮಿಸಿದ ಟ್ರಕ್ ಪರಸ್ಪರ ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಕೊಪ್ಪ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English