- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಎಂಡೋ ಸಂತ್ರಸ್ತ ಕುಟುಂಬದ ನಾಲ್ವರು ಕೆರೆಗೆ ಹಾರಿ ಆತ್ಮಹತ್ಯೆ

belthangady [1]ಬೆಳ್ತಂಗಡಿ: ಎಂಡೋ ಸಂತ್ರಸ್ತ ಕುಟುಂಬದ ನಾಲ್ವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮತ್ತೊಬ್ಬ ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕ ಗ್ರಾಮದಲ್ಲಿ ನಡೆದಿದೆ.

ಕೊಕ್ಕ ಗ್ರಾಮದ ನಿವಾಸಿಗಳಾದ ಬಾಬು ಗೌಡ (62), ಪತ್ನಿ ಗಂಗಮ್ಮ (55), ಮಗ ಸದಾನಂದ (32) ಹಾಗೂ ಮತ್ತೊಬ್ಬ ಮಗ ನಿತ್ಯಾನಂದ (30) ಎಂಬುವರು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಮನೆಯಲ್ಲಿನ ಇಬ್ಬರು ಮಾರಕ ಎಂಡೋ ಸಲ್ಫಾನ್‌ ಅಡ್ಡಪರಿಣಾಮದಿಂದ ಬಳಲುತ್ತಿದ್ದರು.

ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಪಕ್ಕದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ನಾಲ್ವರ ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬ ನಾಪತ್ತೆಯಾಗಿದ್ದಾನೆ.

ದಯಾನಂದ ಎಂಬುವರು ನಾಪತ್ತೆಯಾಗಿದ್ದು, ಸ್ಥಳೀಯರು ಹುಡುಕಾಟ ನಡೆಸುತ್ತಿದ್ದಾರೆ.