ಕಂಬಳದ ಬಗ್ಗೆ ತಡೆಯಾಜ್ಞೆ ತೆರವುಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕ್ರಮ ಕೈಗೊಳ್ಳಬೇಕು: ರವಿಶಂಕರ ಪ್ರಸಾದ್

11:17 AM, Wednesday, January 25th, 2017
Share
1 Star2 Stars3 Stars4 Stars5 Stars
(No Ratings Yet)
Loading...

BJPಮಂಗಳೂರು: ಕಂಬಳದ ಬಗ್ಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ಆದರೆ ಈ ತಡೆಯಾಜ್ಞೆ ತೆರವುಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕ್ರಮ ಕೈಗೊಳ್ಳಲು ಮುಂದಾಗಲಿ ಆಗ ಕೇಂದ್ರ ಸರ್ಕಾರ ಮುಕ್ತವಾಗಿ ಸ್ಪಂದಿಸಲಿದೆ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ ಪ್ರಸಾದ್ ಹೇಳಿದ್ದಾರೆ.

ತಮಿಳುನಾಡು ಸರ್ಕಾರ ಕೈಗೊಂಡ ಸುಗ್ರೀವಾಜ್ಞೆ ರೀತಿಯಲ್ಲೆ ಕರ್ನಾಟಕ ಸರ್ಕಾರ ಕಂಬಳ ಬಗ್ಗೆ ನಿರ್ಣಯ ಕೈಗೊಳ್ಳಲಿ ಕಂಬಳದ ಬಗ್ಗೆ ಮೋದಿ ಸರ್ಕಾರ ಗೌರವ ಇರಿಸಿದ್ದು ಸ್ಥಳೀಯ ಕಲೆ ಸಂಸ್ಕೃತಿ ಆಚರಣೆ ಕ್ರೀಡೆಗಳ ಬಗ್ಗೆ ಕೇಂದ್ರ ಸರ್ಕಾರ ಗೌರವ ಹೊಂದಿದೆ ಎಂದರು.

BJPಈ ಕುರಿತಂತೆ ಕಂಬಳ ನಿಷೇಧವನ್ನು ವಿರೋಧಿಸಿ ಸಚಿವ ರವಿಶಂಕರ್ ಪ್ರಸಾದ್‌ಗೆ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಮನವಿ ಸಲ್ಲಿಸಿದ್ದು ನಿಷೇಧವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ. ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಸಚಿವರು ನೀಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English