ಹೆಜ್ಜೇನು ದಾಳಿಗೆ ತುತ್ತಾಗಿ ಮಹಿಳೆಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಸಾವು

10:18 AM, Saturday, January 28th, 2017
Share
1 Star2 Stars3 Stars4 Stars5 Stars
(No Ratings Yet)
Loading...

Kamalaಮಂಗಳೂರು: ಹೆಜ್ಜೇನು ದಾಳಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ದೇರಳಕಟ್ಟೆಯ ನಿಟ್ಟೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಡಿ.8ರಂದು ಉಳಾಯಿಬೆಟ್ಟು ನಿವಾಸಿ ಕಮಲ, ಪಿಲಾರ್ ನಿವಾಸಿ ಶ್ರೀಧರ್, ಪತ್ನಿ ಲೀಲಾವತಿ ಪಿಲಾರ್ ಹಾಗೂ ಲಕ್ಷ್ಮಿ ಎಂಬುವರು ಹೆಜ್ಜೇನು ದಾಳಿಗೆ ತುತ್ತಾಗಿದ್ದರು. ಈ ಪೈಕಿ ಕಮಲ (65) ಹೆಜ್ಜೇನು ದಾಳಿಗೊಳಗಾದ ದಿನವೇ ಮೃತಪಟ್ಟಿದ್ದರು.

ಇನ್ನು ಚಿಂತಾಜನಕ ಸ್ಥಿತಿಯಲ್ಲಿದ್ದ ಲೀಲಾವತಿ ದೇರಳಕಟ್ಟೆ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English