ದರೋಡೆ ಪ್ರಕರಣ: ಉರ್ವ ಠಾಣಾ ಪೊಲೀಸರಿಂದ ಮೂವರ ಬಂಧನ

10:26 AM, Tuesday, January 31st, 2017
Share
1 Star2 Stars3 Stars4 Stars5 Stars
(No Ratings Yet)
Loading...

Mangaloreಮಂಗಳೂರು: ಹಲವಾರು ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರನ್ನು ಮಂಗಳೂರು ಉರ್ವ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮಂಗಳೂರು ಕಸ್ಬ ಬೆಂಗ್ರೆಯ ಸರ್ಪರಾಜ್, ಮುಹಮ್ಮದ್ ಅವೀಝ್, ಮುಹಮ್ಮದ್ ನಿಜಾಮುದ್ದೀನ್‌ ಎಂದು ಗುರುತಿಸಲಾಗಿದೆ. ಬಂಧಿತರಿಂದ 4 ಮೊಬೈಲ್ ಮತ್ತು ಒಂದು ಬೈಕ್ ವಶಪಡಿಸಿಕೊಳ್ಳಲಾಗಿದೆ.

ಉರ್ವ ಠಾಣೆ , ಕದ್ರಿ ಠಾಣೆ, ಬಂದರ್ ಠಾಣೆ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣ ಮತ್ತು ಪಣಂಬೂರು ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣದಲ್ಲಿ ಈ ಆರೋಪಿಗಳು ಶಾಮೀಲಾಗಿದ್ದರು ಎಂದು ತಿಳಿದುಬಂದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English