[1]ಮಂಗಳೂರು: ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ನಗರದ ಕೂಳೂರು ಬಳಿ ಕಾವೂರು ಪೊಲೀಸರು ಬಂಧಿಸಿದ್ದಾರೆ.
ಕೋಡಿಕಲ್ ನಿವಾಸಿಗಳಾದ ಬಿ.ಸಿ.ರೋಡ್ ಟೋಲ್ಗೇಟ್ನಲ್ಲಿ ಕೆಲಸ ಮಾಡುವ ಕಾರ್ತಿಕ್ರಾಜ್ (21) ಹಾಗೂ ನಗರದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಪೃಥ್ವಿ (20) ಬಂಧಿತರು.
ಗಾಂಜಾ ಸೇವನೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಕಾವೂರು ಠಾಣಾ ಪೊಲೀಸರು, ಕಾರ್ಯಾಚರಣೆ ನಡೆಸಿದ್ದಾರೆ. ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ.
ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.