[1]ಮಂಗಳೂರು: ಧರ್ಮಸ್ಥಳ ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ವ್ಯಕ್ತಿಯ ಬಳಿ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಧರ್ಮಸ್ಥಳ ಪೊಲೀಸರು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಶ್ರೀನಿವಾಸುಲು(25) ಎಂಬಾತನನ್ನು ಬಂಧಿಸಿದ್ದಾರೆ.
ಆರೋಪಿಯು ಡಿ. 25 ರಂದು ಬೆಂಗಳೂರಿನ ಲೋಕೇಶ್ ಎಂಬವರು ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗ ಅವರ ಪ್ಯಾಂಟ್ ಕಿಸೆಯಿಂದ ಎಟಿಎಂ ಕಾರ್ಡ್ , 8700 ರೂ. ನಗದು ಕಳವು ಮಾಡಿದ್ದ.
ಇನ್ನು ಕಳವು ಮಾಡಿದ್ದ ಎಟಿಎಂನಿಂದ ಮಂಗಳೂರಿನಲ್ಲಿ ಚಿನ್ನಾಭರಣವನ್ನು ಖರೀದಿಸಿದ್ದ. ಇದರ ಆಧಾರದಲ್ಲಿ ಬೆಳ್ತಂಗಡಿ ಪಿಎಸ್ಐ ರವಿ ಬಿ.ಎಸ್. ಆರೋಪಿಯನ್ನು ಇಂದು ಬಂಧಿಸಿದ್ದಾರೆ.