ಮಂಗಳೂರು: ಬಂಟ್ವಾಳ ತಾಲೂಕಿನ ಎಸ್.ವಿ.ಎಸ್. ಕಾಲೇಜು ರಸ್ತೆಯ ವೈದ್ಯನಾಥ ದೈವಸ್ಥಾನದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಅರ್ಚಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ವಿಟ್ಲ ನಿವಾಸಿ, ಅನಂತೇಶ್ವರ ದೇವಾಲಯದ ಪ್ರಧಾನ ಅರ್ಚಕ, ಜ್ಯೋತಿಷಿ ಕಾರ್ತಿಕ್ ಭಟ್(38) ಮೃತಪಟ್ಟವರು. ಕಟೀಲು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಗುರುವಾರ ರಾತ್ರಿ ತಮ್ಮ ಕಾರಿನಲ್ಲಿ ವಾಪಸ್ ಬರುತ್ತಿದ್ದಾಗ ಈ ಘಟನೆ ನಡೆದಿದೆ.
ಮೃತ ಕಾರ್ತಿಕ್ ಭಟ್ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದ್ದು, ವೈದ್ಯನಾಥ ದೈವಸ್ಥಾನದ ಬಳಿ ರಸ್ತೆ ಪಕ್ಕದಲ್ಲಿರುವ ಸುಮಾರು 40 ಅಡಿ ಆಳಕ್ಕೆ ಕಾರು ಉರುಳಿ ಬಿದ್ದಿದೆ.
ಅಪಘಾತದಿಂದ ಕಾರು ಜಖಂಗೊಂಡಿದ್ದು, ಕಾರ್ತಿಕ್ ಭಟ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿ ಕಾರ್ತಿಕ್ ಭಟ್ರ ತಂದೆ ವಿಜಯ ಭಟ್, ತಾಯಿ ದೀಪಾ ಭಟ್, ಮಕ್ಕಳಾದ ಅಥರ್ವ, ಆದ್ಯ ಇದ್ದರು. ಇವರೆಲ್ಲ ಸಣ್ಣಪುಟ್ಟ ಗಾಯಗೊಂಡಿದ್ದು ಪ್ರಾಣಾಪಯದಿಂದ ಪಾರಾಗಿದ್ದಾರೆ .
ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Click this button or press Ctrl+G to toggle between Kannada and English