[1]ಮಂಗಳೂರು: ಯುವತಿಯನ್ನು ಬೆದರಿಸಿ ಅತ್ಯಾಚಾರ ನಡೆಸಿದ ಆರೋಪದಲ್ಲಿ ಕೊಣಾಜೆ ಪೊಲೀಸರು ಒಬ್ಬನನ್ನು ಬಂಧಿಸಿದ್ದು, ಇನ್ನೊಬ್ಬ ಪರಾರಿಯಾಗಿದ್ದಾನೆ.
ಬಂಧಿತನ್ನು ಬೊಳಿಯಾರ್ ನಿವಾಸಿ ಮಹಮ್ಮದ್ ಮುಸ್ತಾಫ (23) ಎಂದು ಗುರುತಿಸಲಾಗಿದ್ದು, ಇನ್ನೊಬ್ಬ ಆರೋಪಿ ಆಶ್ರಫ್ ತಲೆಮರೆಸಿಕೊಂಡಿದ್ದಾನೆ.
ಕೆಲ ತಿಂಗಳ ಹಿಂದೆ ಇಬ್ಬರು ಆರೋಪಿಗಳು ಯುವತಿಯನ್ನು ಬೆದರಿಸಿ ಅತ್ಯಾಚಾರ ನಡೆಸಿದ್ದರು ಎಂದು ಆರೋಪಿಸಲಾಗಿದೆ. ಸಂತ್ರಸ್ತ ಯುವತಿ ಕೊಣಾಜೆ ಠಾಣೆಗೆ ದೂರು ನೀಡಿದ್ದಳು. ಬಂಧಿತ ಮುಸ್ತಾಫನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.