ಮೂಲ್ಕಿಯ ಭಾರತ್ ಬ್ಯಾಂಕ್ ಮ್ಯಾನೇಜರ್ ತೀವ್ರ ಜ್ವರದಿಂದ ಚಿಕಿತ್ಸೆ ಫಲಕಾರಿಯಾಗದೆ ಸಾವು

11:57 AM, Monday, February 13th, 2017
Share
1 Star2 Stars3 Stars4 Stars5 Stars
(No Ratings Yet)
Loading...

Lakshminarayana-C-Saliyanಮಂಗಳೂರು:ತೀವ್ರ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಮೂಲ್ಕಿಯಲ್ಲಿ ನಡೆದಿದ್ದು, ಹೆಚ್1ಎನ್1 ಸೋಂಕಿನಿಂದ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ.

ಮೂಲ್ಕಿಯ ಭಾರತ್ ಬ್ಯಾಂಕ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಉಡುಪಿ ಹೆಜಮಾಡಿಯ ಲಕ್ಷ್ಮೀನಾರಾಯಣ ಎಂಬುವರೆ ಹೆ ಚ್1ಎನ್1ಗೆ ಬಲಿಯಾದವರು. ಇವರು ಕಳೆದ 15 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು.

ಪ್ರಾರಂಭದಲ್ಲಿ ಮೂಲ್ಕಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಜ್ವರ ಉಲ್ಬಣಿಸಿದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಲಕ್ಷ್ಮೀನಾರಾಯಣ ಹೆಚ್1ಎನ್1ನಿಂದ ಬಳಲುತ್ತಿರುವ ಶಂಕೆಯಿದ್ದು, ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ನಿರೀಕ್ಷಿಸಲಾಗುತ್ತಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English