ಪ್ರಹ್ಲಾದ್ ದಾಮೋದರ್ ಮೋದಿ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ

5:40 PM, Wednesday, April 19th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

Prahalad Modiಮಂಗಳೂರು:  ಪ್ರಧಾನಿ ನರೇಂದ್ರ ಮೋದಿ ಅವರ ಹಿರಿಯ ಸಹೋದರ ಪ್ರಹ್ಲಾದ್ ದಾಮೋದರ್ ಮೋದಿ ಅವರು ಮಂಗಳೂರಿಗೆ ಆಗಮಿಸಿದ್ದು, ಸೋಮವಾರ ಮಂಗಳೂರಿನ ಪ್ರಸಿದ್ದ ಕ್ಷೇತ್ರವಾದ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು.

ಪ್ರಹ್ಲಾದ್ ದಾಮೋದರ್ ಮೋದಿಯವರನ್ನು ಶ್ರೀ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಎಚ್.ಎಸ್.ಸಾಯಿರಾಂ ಹಾಗೂ ಶ್ರೀ ಕ್ಷೇತ್ರದ ಇತರ ಪದಾಧಿಕಾರಿಗಳು ಆತ್ಮೀಯವಾಗಿ ಸ್ವಾಗತಿಸಿದರು. ಪ್ರಹ್ಲಾದ್ ದಾಮೋದರ್ ಮೋದಿಯವರು ಶ್ರೀ ಕ್ಷೇತ್ರದಲ್ಲಿರುವ ವಿವಿಧ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಬಿಜೆಪಿ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ವೇದವ್ಯಾಸ ಕಾಮಾತ್, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಬಿಜೆಪಿಯ ಮುಖಂಡರಾದ ರವಿಶಂಕರ್ ಮಿಜಾರ್, ನಿತಿನ್ ಕುಮಾರ್ ಮುಂತಾದವರು ಈ ವೇಳೆ ಉಪಸ್ಥಿತರಿದ್ದರು.

ಪ್ರಹ್ಲಾದ್ ದಾಮೋದರ್ ಮೋದಿಯವರ ಜೊತೆ ಅವರ ಪತ್ನಿ ಭಗವತಿ ಬೆನ್ ಮೋದಿ ಹಾಗೂ ಕುಟುಂಬಿಕರು ಆಗಮಿಸಿದ್ದು, ಅವರು ಕರಾವಳಿಯ ಹಲವು ತೀರ್ಥ ಕ್ಷೇತ್ರಗಳಿಗೆ ಭೇಟಿ ನೀಡುವ ಉದ್ದೇಶದಿಂದ ಮಂಗಳೂರಿಗೆ ಆಗಮಿಸಿದ್ದಾರೆ ಎನ್ನಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English