ಕೊಣಾಜೆ : ಇನೋಳಿಯಲ್ಲಿ ನಿಲ್ಲಿಸಲಾಗಿದ್ದ ನಾಲ್ಕು ಬಸ್ ಗಳಿಗೆ ಕಿಡಿಗೇಡಿಗಳು ಕಲ್ಲೆಸೆದು ಹಾನಿ ಗೈದ ಘಟನೆ ನಡೆದ ಪ್ರಕರಣ ಕೊಣಾಜೆ ಠಾಣೆಯಲ್ಲಿ ಗುರುವಾರ ದಾಖಲಾಗಿದೆ.
ಗಣೇಶ್ ಶೆಟ್ಟಿ ಎಂಬವರ ಮಾಲಕತ್ವದ ಅಕ್ಷಯ ಹೆಸರಿನ ಎರಡು ಬಸ್ ಗಳು, ಪುರುಷೋತ್ತಮ ಶೆಟ್ಟಿ ಎಂಬವರ ಮಾಲಕತ್ವದ ಚಿತ್ರರಾಜ್ ಹಾಗೂ ಜಗನ್ನಾಥ ಶೆಟ್ಟಿ ಎಂಬವರ ಮಾಲಕತ್ವದ ಪದ್ಮಶ್ರೀ ಬಸ್ ಗಳನ್ನು ಎಂದಿನಂತೆ ಬುಧವಾರ ರಾತ್ರಿ ಕೂಡಾ ನಿಲ್ಲಿಸಲಾಗಿತ್ತು. ಈ ಸಂದರ್ಭ ಕಿಡಿಗೇಡಿಗಳು ಕಲ್ಲು ತೂರಿ ಗಾಜುಗಳನ್ನು ಪುಡಿಗೈದಿದ್ದಾರೆ.
ಕೆಲವು ತಿಂಗಳುಗಳ ಹಿಂದೆ ಪಾವೂರು ಸರ್ಕಾರಿ ಪ್ರೌಢಶಾಲೆಯ ಮುಂಭಾಗದ ಮುಖ್ಯರಸ್ತೆಯಲ್ಲಿ ಬಾಟಲ್ಗಳನ್ನು ಒಡೆದು ಹಾಕಿದ್ದಲ್ಲದೆ, ಸ್ಥಳೀಯರು ಬಸ್ ಪ್ರಯಾಣಿಕರಿಗಾಗಿ ನಿರ್ಮಿಸಿದ್ದ ತಾತ್ಕಾಲಿಕ ತಂಗುದಾಣಕ್ಕೆ ಹಾನಿಮಾಡಿದ ಘಟನೆಯೂ ನಡೆದಿದೆ. ಈ ಭಾಗದಲ್ಲಿ ಸೌಹಾರ್ಧತೆಗೆ ದಕ್ಕೆ ತರುವ ಯತ್ನ ಪದೆ ಪದೇ ನಡೆಯುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
Click this button or press Ctrl+G to toggle between Kannada and English