ಭಿಕ್ಷೆ ಬೇಡಿ ಹಣ ಸಂಗ್ರಹಿಸಿ ಬಿ .ಸಿ .ರೋಡ್ ಸರ್ವಿಸ್ ರಸ್ತೆ ದುರಸ್ತಿಗೆ ಆಗ್ರಹ

12:26 PM, Saturday, July 1st, 2017
Share
1 Star2 Stars3 Stars4 Stars5 Stars
(No Ratings Yet)
Loading...

Bantwal Rikshwa
ಬಂಟ್ವಾಳ : ಹೊಂಡ-ಗುಂಡಿಗಳಿಂದ ಆವೃತವಾಗಿ, ಸಂಪೂರ್ಣ ಹದಗೆಟ್ಟಿರುವ ಬಿ .ಸಿ . ರೋಡ್ ಸರ್ವಿಸ್ ರಸ್ತೆಯನ್ನು ದುರಸ್ತಿ ಮಾಡುವಂತೆ ಆಗ್ರಹಿಸಿ ಬಿ .ಸಿ . ರೋಡ್ ರಿಕ್ಷಾ ಚಾಲಕ-ಮಾಲಕರು ಭಿಕ್ಷೆ ಬೇಡಿ ಹಣ ಸಂಗ್ರಹಿಸುವ ಮೂಲಕ ವಿನೂತನ ರೀತಿಯಲ್ಲಿ ಧರಣಿ ನಡೆಸಿದರು.

8 ವರ್ಷಗಳಿಂದ ಈ ರಸ್ತೆ ಹದಗೆಟ್ಟಿದ್ದು,ಸಂಬಂಧಪಟ್ಟವರಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ.ಈ ಹಿನ್ನೆಲೆಯಲ್ಲಿ ಸಂಸದರು, ಜಿಲ್ಲಾ ಡಳಿತ, ರಾಷ್ಟ್ರೀಯ ಹೆzರಿ ಪ್ರಾಧಿಕಾರಕ್ಕೆ ಬಿಸಿ ಮುಟ್ಟಿಸುವ ಸಲುವಾಗಿ ಭಿಕ್ಷೆ ಬೇಡಿ ಹಣ ಸಂಗ್ರಹಿಸುವ ಮೂಲಕ ಧರಣಿ ನಡೆಸಲಾಯಿತು.

ಈ ಸಂದರ್ಭ ಬಿ .ಸಿ . ರೋಡ್ ನ ರಿಕ್ಷಾ ಚಾಲಕ-ಮಾಲಕರ ಸಂಘದ ಅಧ್ಯಕ್ಷ ವಸಂತ ಕುಮಾರ್ ಮಣಿಹಳ್ಳ, ಕಾರ‍್ಯದರ್ಶಿ ಚಂದ್ರಶೇಖರ್, ಟೆಂಪೋ ಚಾಲಕರ ಸಂಘದ ಅದ್ಯಕ್ಷ ಕೃಷ್ಣ ಅಲ್ಲಿಪಾದೆ, ಕಾರ‍್ಯದರ್ಶಿ ನಾರಾಯಣ, ಗೌರವಾಧ್ಯಕ್ಷ ಸದಾನಂದ ನಾವೂರು ಮತ್ತಿತರರು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English