ಸಮಾಜಘಾತುಕ ಶಕ್ತಿಗಳ ವಿರುದ್ಧ ಬಿಗಿ ಕಾನೂನು ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ

6:39 PM, Friday, July 7th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

CM Siddaramaiahಮಂಗಳೂರು :  ಅಡ್ಯಾರ್ ನಲ್ಲಿ  ನಡೆಯುವ ಕಾಂಗ್ರೆಸ್ ಪಕ್ಷದ ಮೈಸೂರ್ ವಿಭಾಗದ  ಪ್ರತಿನಿಧಿಗಳ ಸಮಾವೇಶಕ್ಕೆ ಆಗಮಿಸಿದ ಕರ್ನಾಟಕ ದ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಕರ್ತರೊಂದಿಗೆ ಮಾತನಾಡಿ ಕೆಲವು ಸಮಾಜ ಘಾತುಕ ಶಕ್ತಿಗಳು ಕಾನೂನು ಕೈಗೆತ್ತಿಕೊಳ್ಳುತ್ತಿ ಕೊಂಡು ಜಿಲ್ಲೆಯ ಜನರ ನೆಮ್ಮದಿಯನ್ನು ಹಾಳು ಮಾಡುತ್ತಿದ್ದಾರೆ ನಮ್ಮ ಸರ್ಕಾರ ಇದಕ್ಕೆ ಖಂಡಿತ ಅವಕಾಶ ನೀಡುವುದಿಲ್ಲ ಎಂದು  ಹೇಳಿದರು.

ಸಮಾಜದಲ್ಲಿ ಅಶಾಂತಿ ಮೂಡಿಸಲು ಯತ್ನಿಸುವ ಸಂಘಟನೆ ಸಫಲತೆ ಕಾಣುವುದಿಲ್ಲ, ಸಮಾಜಘಾತುಕ ಶಕ್ತಿಗಳ ವಿರುದ್ಧ ಬಿಗಿ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದವರು ಹೇಳಿದರು.

ಈ ಸಂದರ್ಭ ಸಚಿವ ಯು.ಟಿ.ಖಾದರ್, ರಮಾನಾಥ ರೈ. ಶಾಸಕ ಅಭಯಚಂದ್ರ ಜೈನ್, ಐವನ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು.

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English