- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಬಂಟ್ವಾಳದಲ್ಲಿ ಕಾರ್ಯಕರ್ತರಿಗೆ ಧೈರ್ಯ ತುಂಬಿದ ಡಿ.ವಿ.ಸದಾನಂದ ಗೌಡ

dvs [1]ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಕಚೇರಿಗೆ ಮಾನ್ಯ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವರು ಕೇಂದ್ರ ಸರಕಾರ, ಮಾಜಿ ಮುಖ್ಯಮಂತ್ರಿಗಳು ಡಿ.ವಿ.ಸದಾನಂದ ಗೌಡ ಭೇಟಿ ನೀಡಿದರು. ಕಾರ್ಯಕರ್ತರನ್ನು ಉದ್ದೇಶಿಸಿ ನೀವು ಯಾರು ಧೃತಿಗೇಡಬೇಡಿ ನಿಮ್ಮದೊಂದಿಗೆ ಕಠಿಣ ಪರಿಸ್ಥಿತಿಯಲ್ಲಿ ನಾವು ಇದ್ದೇವೆ ಎಂದು ಪಕ್ಷದ ಕಾರ್ಯಕರ್ತರಲ್ಲಿ ಧೈರ್ಯ ತುಂಬಿದರು.

ಬಿಜೆಪಿ ಜಿಲ್ಲಾಧ್ಯಕ್ಷರು ಸಂಜೀವ ಮಠಂದೂರು, ಶ್ರೀ ವಿ ಸುನೀಲ್ ಕುಮಾರ್ ವಿಧಾನಸಭೆಯ ಪ್ರತಿಪಕ್ಷ ಮುಖ್ಯಸಚೇತಕರು, ಕ್ಯಾ.ಗಣೇಶ್ ಕಾರ್ಣಿಕ್ ವಿಧಾನ ಪರಿಷತ್‌ನ ಪ್ರತಿಪಕ್ಷ ಮುಖ್ಯಸಚೇತಕರು, ದ.ಕ ಜಿಲ್ಲಾ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಎನ್.ಯೋಗೀಶ್ ಭಟ್ ಮಾಜಿ ಶಾಸಕರು, ಕೆ.ಮೊನಪ್ಪ ಭಂಡಾರಿ ಮಾಜಿ ವಿಧಾನ ಪರಿಷತ್ ಸದಸ್ಯರು, ಅಶೋಕ್ ಕುಮಾರ್ ರೈ ಪುತ್ತೂರು ಬಿಜೆಪಿ ಜಿಲ್ಲಾ ಸಮಿತಿ ಸದಸ್ಯರು, ಮಾಜಿ ಶಾಸಕರು ಎ.ರುಕ್ಮಯ ಪೂಜಾರಿ, ಬಿಜೆಪಿ ನೇತಾರರಾದ ರಾಜೇಶ್ ನಾಕ್ ಉಳಿಪ್ಪಾಡಿ, ಕ್ಷೇತ್ರದ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ಕ್ಷೇತ್ರ ಪ್ರಧಾನಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ. ಮೋನಪ್ಪ ದೇವಸ್ಯ,ಕ್ಷೇತ್ರ ಕಾರ್ಯದರ್ಶಿಗಳಾದ ರಮನಾಥ ರಾಯಿ, ಸೀತಾರಾಮ ಪೂಜಾರಿ, ದಿನೇಶ್ ಭಂಡಾರಿ,ಎ ಗೋವಿಂದ ಪ್ರಭು, ಕೃಷ್ಣಪ್ಪ ಪೂಜಾರಿ, ದೇವಪ್ಪ ಪೂಜಾರಿ ಉಪಸ್ಥಿತರಿದ್ದರು.