ಶರತ್ ಸಾವಿನ ಸುದ್ದಿಯನ್ನು ಮುಚ್ಚಿಟ್ಟು ಮುಖ್ಯಮಂತ್ರಿಗಳು ಕಾಂಗ್ರೆಸ್ ಸಮಾವೇಶ ಮಾಡುತ್ತಾರೆ : ಕರಂದ್ಲಾಜೆ

8:50 PM, Thursday, July 13th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

BJP Mahila Morcha ಮಂಗಳೂರು :ಶರತ್ ಗುರುವಾರ ಮಧ್ಯರಾತ್ರಿಯೆ ಮೃತಪಟ್ಟಿದ್ದಾರೆ ಎಂದು ಗೊತ್ತಿದ್ದೂ ಮುಖ್ಯಮಂತ್ರಿಗಳು ಮಂಗಳೂರಲ್ಲಿ ಕಾರ್ಯಕರ್ತರ ಸಮಾವೇಶ ಮಾಡಿ ಸಂಭ್ರಮ ಆಚರಿಸಿದ್ದಾರೆ. ಮುಖ್ಯಮಂತ್ರಿ ಹೋಗುವವರೆಗೆ ಶರತ್ ಸಾವಿನ ಸುದ್ದಿಯನ್ನು ಮುಚ್ಚಿಟ್ಟು ಕಾಂಗ್ರೆಸ್ ನಾಯಕರು ಸಮಾವೇಶ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಸಂಸದೆ ಶೋಭಾ ಕರಂದ್ಲಾಜೆ ವಿಷಾದ ವ್ಯಕ್ತ ಪಡಿಸಿದರು.

ದ.ಕ. ಜಿಲ್ಲಾ ಬಿ.ಜೆ.ಪಿ. ಮಹಿಳಾ ಮೋರ್ಚಾದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು , ಒಂದು ವೇಳೆ ಪ್ರಭಾಕರ ಭಟ್  ಅವರನ್ನು  ಮುಟ್ಟಿದ್ದೇ ಆದಲ್ಲಿ, ಅದು ಕಾಂಗ್ರೆಸ್ ಶವ ಪೆಟ್ಟಿಗೆಯ ಮೇಲಿನ ಕೊನೆಯ ಮೊಳೆ ಅಗಲಿದೆ ಎಂದು ಶೋಭಾ ಕರಂದ್ಲಾಜೆ ಎಚ್ಚರಿಸಿದರು.

ನಿಜವಾದ ಅಪರಾಧಿಗಳನ್ನು ಬಂಧಿಸಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಭಾಕರ್ ಭಟ್ ಕಲ್ಲಡ್ಕ, ಶೋಭಾ ಕರಂದ್ಲಾಜೆ ಅವರನ್ನು ಬಂಧಿಸುವಂತೆ ಸೂಚನೆ ನೀಡುತ್ತಿದ್ದಾರೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದರು.

ಕೆಲಸ ಮಾಡಲು ಆಗುವುದಿಲ್ಲ ಎಂದು ಸ್ವಯಂ ನಿವೃತ್ತಿ ಪಡೆದ ಕೆಂಪಯ್ಯ ಅವರನ್ನು ಕೂರಿಸಿಕೊಂಡು ಮುಖ್ಯಮಂತ್ರಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಈ ಮೂಲಕ ಪೊಲೀಸ್ ಅಧಿಕಾರಿಗಳಿಗೆ ಅವಮಾನ ಮಾಡಿದ್ದಾರೆ ಎಂದು ದೂರಿದರು.

ಶೋಭಾ ಕರಂದ್ಲಾಜೆ, ಭಟ್ ರನ್ನು ಬಂಧಿಸುವಂತೆ ಕೆಂಪಯ್ಯ ಹೇಳಿದ್ದಾರೆ. ನಾನು ಸವಾಲು ಹಾಕುತ್ತೇನೆ. ಧೈರ್ಯವಿದ್ದರೆ ಮುಟ್ಟಿ ನೋಡಿ. ಮುಂದಾಗುವ ಅನಾಹುತಕ್ಕೆ ಸರ್ಕಾರವೇ ಹೊಣೆ ಆಗಬೇಕಾಗುತ್ತದೆ ಎಂದರು.

BJP Mahila Morcha

BJP Mahila Morcha

BJP Mahila Morcha

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English