- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ತುಳು ಧಾರಾವಾಹಿ ನಿರ್ಮಾಪಕ ಪ್ರವೀಣ್ ಕುಮಾರ್ ಆತ್ಮಹತ್ಯೆ

Praveen B [1]ಉಳ್ಳಾಲ : ತುಳು ಧಾರಾವಾಹಿ ನಿರ್ಮಾಪಕ ಪ್ರವೀಣ್ ಕುಮಾರ್ ಬಿ(51) ಎಂಬವರು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬುಧವಾರ ತಡರಾತ್ರಿ ಕುಂಪಲ ಮೂರುಕಟ್ಟೆ ಎಂಬಲ್ಲಿ ನಡೆದಿದೆ.

ಪ್ರವೀಣ್ ಅವರು ಬುಧವಾರ ತಡರಾತ್ರಿ ಮೂರುಕಟ್ಟೆಯ ತನ್ನ ಮನೆಯಲ್ಲಿ ಪತ್ನಿ ಮತ್ತು ಮೂವರು ಮಕ್ಕಳು ಇರುವಾಗಲೇ ಕೋಣೆಯೊಳಗೆ ಬಾಗಿಲು ಹಾಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಹಳ ಹೊತ್ತಾದರೂ ಪ್ರವೀಣ್ ಅವರು ಕೋಣೆಯಿಂದ ವಾಪಾಸಾಗದೇ ಇದ್ದಾಗ ಅನುಮಾನಗೊಂಡು ಮನೆಮಂದಿ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿರುವುದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ.

ಪ್ರವೀಣ್ ಅವರು ” ದೇವೆರ್ನ ದಯೆ “ತುಳು ಧಾರಾವಾಹಿಯೊಂದನ್ನು ನಿರ್ಮಿಸುತ್ತಿದ್ದು, ಸ್ಥಳೀಯವಾಗಿ ಧಾರ್ಮಿಕ ಹಾಗೂ ಸಾಮಾಜಿಕ ಸಂಘಟನೆಗಳಲ್ಲಿ ಹಾಗೂ ಬಿಜೆಪಿ ಪಕ್ಷದಲ್ಲೂ ಸಕ್ರಿಯವಾಗಿ ಗುರುತಿಸಿ ಕೊಂಡಿದ್ದರು.