- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮಹಿಳೆಗೆ ಡಿಕ್ಕಿ ಹೊಡೆದ ಅಭಯಚಂದ್ರ ಜೈನ್ ಕಾರು, ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು

Abhayachandra [1]ಮಂಗಳೂರು : ಶಾಸಕ ಅಭಯಚಂದ್ರ ಜೈನ್ ಅವರು ಇದ್ದ ಕಾರು ಪಾದಚಾರಿ ಮಹಿಳೆಯೊಬ್ಬರಿಗೆ ಢಿಕ್ಕಿ ಹೊಡೆದು ಚಿಕಿತ್ಸೆ ನೀಡದೆ ಹೊರಟು ಹೋದ ಘಟನೆ  ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ಶುಕ್ರವಾರ ದಾಖಲಾಗಿದೆ.

ಜೈನಾಬಿ(48) ಎಂಬ ಮಹಿಳೆ ಶುಕ್ರವಾರ ಸಂಜೆ ಬಜ್ಪೆ ಸಮೀಪದ ಕಿನ್ನಿಪದವು ಮುಖ್ಯರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಶಾಸಕ ಅಭಯಚಂದ್ರ ಜೈನ್ ಅವರಿದ್ದ ಇನ್ನೋವಾ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ವೇಳೆ ರಸ್ತೆಗೆ ಬಿದ್ದ ಜೈನಾಬಿಯವರನ್ನು ಚಿಕಿತ್ಸೆಗೆ ಕರೆದೊಯ್ಯದೆ ಶಾಸಕರು ಕಡೆಗಣಿಸಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ಜೈನಾಬಿ ನೀಡಿರುವ ದೂರಿನ ಆಧಾರದಲ್ಲಿ ಅಭಯಚಂದ್ರ ಜೈನ್ ಹಾಗೂ ಅವರ ಕಾರಿನ ಚಾಲಕನ ವಿರುದ್ಧ ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.