ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ರಾಜ್ಯ ಭ್ರಷ್ಟಾಚಾರದಲ್ಲಿ ಪ್ರಥಮ ಸ್ಥಾನದತ್ತ ಸಾಗುತ್ತಿದೆ : ಸಂಜೀವ ಮಠಂದೂರು

7:11 PM, Friday, August 4th, 2017
Share
1 Star2 Stars3 Stars4 Stars5 Stars
(No Ratings Yet)
Loading...

Matandoorಮಂಗಳೂರು : ದೇಶ ಕಂಡ ಮಹಾನ್ ಭ್ರಷ್ಟಾಚಾರಿಗಳ ಪಟ್ಟಿಯಲ್ಲಿ  ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ರಾಜ್ಯ ಪ್ರಥಮ ಸ್ಥಾನದತ್ತ ಸಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು ಆರೋಪಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಾಯ ತೆರಿಗೆ ಇಲಾಖೆ ರಾಜ್ಯದ ಎಲ್ಲಾ ಭ್ರಷ್ಟರ ಪಟ್ಟಿ ಮಾಡಿ ದಾಳಿ ನಡೆಸುವ ಮೂಲಕ ಕರ್ನಾಟಕವನ್ನು ಭ್ರಷ್ಟಾಚಾರ ಮುಕ್ತವಾಗಿಸಬೇಕು ಎಂದು ತೀರ್ಮಾನ ಮಾಡಿದೆ ಎಂದು ಹೇಳಿದರು.

ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮನೆ ಮೇಲೆ ದಾಳಿ ನಡೆಯುತ್ತಿರುವಾಗಲೇ ಮುಖ್ಯಮಂತ್ರಿಗಳು ತನಿಖೆಗೆ ಅಡ್ಡಿ ಪಡಿಸಲು ಆರಂಭಿಸಿದರು. ಕಾಂಗ್ರೆಸ್ ಕಾರ್ಯಕರ್ತರ ಮೂಲಕ ಪತ್ರಿಭಟನೆ ನಡೆಸಿ ಅಸಹಾಯಕತೆ ತೋರಿಸಿದರು. ತಾವು ನಿಷ್ಕಳಂಕರು ಎಂದು ಸಾಬೀತು ಪಡಿಸಲು ಪೂರ್ಣ ಸಹಕಾರ ನೀಡಬೇಕಿತ್ತು ಎಂದು ಟೀಕಿಸಿದರು.

ಡಿಕೆಶಿ ಮನೆ ಮೇಲೆ ದಾಳಿಯಾದಾಗ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನಲ್ಲಿ ಐಟಿ ಸಂಸ್ಥೆಯ ಮೇಲೆಯೇ ದಾಳಿ ನಡೆಸಿ ಸೊತ್ತು ನಾಶ ಮಾಡಿದ್ದಾರೆ. ಈ ರೀತಿ ಗೂಂಡಾಗಿರಿ ಪ್ರದರ್ಶಿಸಿರುವುದು ಖಂಡನೀಯ. ರಾಜ್ಯದ ಮುಖ್ಯಮಂತ್ರಿಯಾದ ಸಿದ್ದರಾಮಯ್ಯನವರಿಗೆ ಜನರ ಹಿತಾಸಕ್ತಿ ಬೇಕಿಲ್ಲ ಎಂದು ಕಿಡಿಕಾರಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English