[1]ಮಂಗಳೂರು: ಬೀದಿಬದಿ ವ್ಯಾಪಾರಸ್ಥರ ಮೇಲಾಗುತ್ತಿರುವ ನಿರಂತರ ದಾಳಿಯನ್ನು ಖಂಡಿಸಿ ಹಾಗೂ ಪರ್ಯಾಯ ವ್ಯವಸ್ಥೆಗಾಗಿ ಒತ್ತಾಯಿಸಿ ಬೀದಿಬದಿ ವ್ಯಾಪಾರಸ್ಥರು ಸಿಐಟಿಯು ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ದ.ಕ. ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ ಗೌರವಾಧ್ಯಕ್ಷ ಸುನಿಲ್ ಕುಮಾರ್ ಬಜಾಲ್, ಬೀದಿಬದಿ ವ್ಯಾಪಾರಸ್ಥರ ಮೇಲೆ ಇಲ್ಲ ಸಲ್ಲದ ಆರೋಪ ಮಾಡುವ ಮಂಗಳೂರು ಮಹಾನಗರ ಪಾಲಿಕೆ ನಿರಂತರವಾಗಿ ದಾಳಿ ನಡೆಸುವ ಮೂಲಕ ಬೀದಿಬದಿ ವ್ಯಾಪಾರಸ್ಥರನ್ನು ಬೀದಿಪಾಲು ಮಾಡಲು ಹೊರಟಿದೆ ಎಂದು ಆರೋಪಿಸಿದರು.
ಈ ವೇಳೆ ಸಂಘದ ಜಿಲ್ಲಾ ಮುಖಂಡರಾದ ಮಹಮ್ಮದ್ ಮುಸ್ತಾಫ, ಸಂತೋಷ್ ಆರ್.ಎಸ್, ಹರೀಶ್ ಪೂಜಾರಿ, ಮಹಮ್ಮದ್ ಆಸಿಫ್, ನೌಶಾದ್, ಅತ್ತಾವುಲ್ಲಾ, ಸಿಯಾಬುದ್ದೀನ್, ಅಣ್ಣಯ್ಯ ಕುಲಾಲ್, ಶ್ರೀಧರ್, ಹಿತೇಶ್ ಪೂಜಾರಿ ಮುಝಾಫರ್ ಮೊದಲಾದವರಿದ್ದರು.