[1]ಪುತ್ತೂರು : ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಯುವಕನೊಬ್ಬ ಬೈಕಿನಲ್ಲಿ ಹಿಂಬಾಲಿಸಿಕೊಂಡು ಬಂದು ಪ್ರೀತಿಸುವಂತೆ ಪೀಡಿಸಿ, ವಿವಾಹಕ್ಕೆ ಒಪ್ಪಿಕೊಳ್ಳುವಂತೆ ಒತ್ತಡ ಹಾಕತೊಡಗಿದ್ದ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದಲ್ಲಿ ನಡೆದಿದೆ.
ಪುತ್ತೂರು ತಾಲೂಕಿನ ಪಾಲ್ತಾಡು ಗ್ರಾಮದ ಮುಕರೆತ್ತಿ ನಿವಾಸಿ ಮಹಮ್ಮದ್ಹ ಕೀಂ ಯಾನೆ ಹಕೀಂ ಎಂಬಾತನ ವಿರುದ್ಧ ಇದೀಗ ಬೆಳ್ಳಾರೆ ಠಾಣೆಯಲ್ಲಿ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಪ್ರಥಮ ಪಿಯು ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿನಿಯನ್ನು ಈ ವಿಚಾರ ಮನೆಯವರಿಗೆ ತಿಳಿಸಿದರೆ ಮಾನಹರಣ ಮಾಡುವುದಾಗಿ ಮತ್ತು ಯುವತಿ ತಂದೆಯ ಅಂಗಡಿ ಕಟ್ಟಡಕ್ಕೆ ಬೆಂಕಿ ಇಡುವುದಾಗಿ ಬೆದರಿಸಲಾರಂಭಿಸಿದ್ದ ಎನ್ನಲಾಗಿದೆ.
ಅಷ್ಟೇ ಅಲ್ಲದೇ ಆಕೆಯ ಸ್ನೇಹಿತೆಯರ ಫೋನ್ ನಂಬರ್ ನೀಡುವಂತೆ ಕಿರುಕಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಈತನ ಬೆದರಿಕೆಗೆ ಮಣಿದ ವಿದ್ಯಾರ್ಥಿನಿ ವಿಚಾರ ಮುಚ್ಚಿಟ್ಟಿದ್ದಳು ಎನ್ನಲಾಗಿದೆ.
ಆರೋಪಿ ನೀಡುತ್ತಿದ್ದ ಕಿರುಕುಳದಿಂದ ನೊಂದ ವಿದ್ಯಾರ್ಥಿನಿ ಗುರುವಾರ ಆತನ ವಿರುದ್ದ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾಳೆ. ಬೆಳ್ಳಾರೆ ಠಾಣೆಯ ಪೊಲೀಸರು ಆರೋಪಿಯ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿದ್ಯಾರ್ಥಿನಿ ದೂರು ನೀಡಿದ ಬೆನ್ನಲ್ಲೇ ಆರೋಪಿ ಯುವಕ ತಲೆಮರೆಸಿಕೊಂಡಿದ್ದಾನೆ. ಆತನ ಪತ್ತೆಗಾಗಿ ಬೆಳ್ಳಾರೆ ಪೊಲೀಸರು ಬಲೆಬೀಸಿದ್ದಾರೆ.
ಹಿಂದೆ ಪರಿಶಿಷ್ಟ ಜಾತಿಯ ಯುವತಿಯೊಬ್ಬಳನ್ನು ಪೊನ್ನಾನಿಗೆ ಕರೆದುಕೊಂಡು ಹೋಗಿ ಮತಾಂತರ ಮಾಡುವ ಪ್ರಯತ್ನ ನಡೆದಿತ್ತು ಪಾಲ್ತಾಡು ಎಂಬಲ್ಲಿ ನಡೆದಿತ್ತು. ಈ ಪ್ರಕರಣದಲ್ಲಿ ಪೊಲೀಸರು ಯುವತಿಯನ್ನು ಪೊನ್ನಾನಿಯಲ್ಲಿ ಪತ್ತೆ ಮಾಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.